ಬೀದರ್‌ | ಆ.10ರವರೆಗೆ ಬೆಳೆ ವಿಮೆ ನೋಂದಾಯಿಸಲು ಅವಧಿ ವಿಸ್ತರಣೆ

Date:

2026ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಸೌಲಭ್ಯಕ್ಕೆ ಆಗಸ್ಟ್ 10ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಬೀದರ್‌ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ತಿಳಿಸಿದ್ದಾರೆ.

- Advertisement -

ಭಾರತ ಸರ್ಕಾರದ ಕೃಷಿ ಮಂತ್ರಾಲಯದ ಬೆಳೆ ವಿಮೆ ವಿಭಾಗದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ತೊಗರಿ (ಮಳೆಯಾಶ್ರಿತ) ಹಾಗೂ ಸೋಯಾಅವರೆ (ಮಳೆಯಾಶ್ರಿತ) ಬೆಳೆಗಳನ್ನು ಅಧಿಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಳ್ಳು (ಮಳೆಯಾಶ್ರಿತ) ಬೆಳೆಗೆ (ಚಿಟಗುಪ್ಪ, ಕೋಹಿನೂರ, ಬಸವಕಲ್ಯಾಣ, ಮಂಠಾಳ, ಮುಡಬಿ, ರಾಜೇಶ್ವರ ಹೋಬಳಿಗಳು), ಭತ್ತ (ನೀರಾವರಿ) ಬೆಳೆಗೆ (ಚಿಟಗುಪ್ಪ, ನಿರ್ಣಾ, ಕಮಠಾಣ, ಬಗದಲ, ಬೀದರ ಉತ್ತರ, ಬೀದರ ದಕ್ಷಿಣ ಹೋಬಳಿಗಳು), ಹತ್ತಿ (ಮಳೆಯಾಶ್ರಿತ) ಬೆಳೆಗೆ (ಔರಾದ್ (ಬಿ), ಚಿಂತಾಕಿ, ಸಂತಪೂರ, ಬೀದರ ಉತ್ತರ, ಬೀದರ ದಕ್ಷಿಣ, ಮನ್ನಳ್ಳಿ ಹೋಬಳಿಗಳು) ಆಯ್ಕೆ ಮಾಡಲಾಗಿದೆ. ತಾಲೂಕಿಗೆ ನಿಗದಿಪಡಿಸಿ, ಹೋಬಳಿ ಮಟ್ಟಕ್ಕೆ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ʼಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ʼ ವಿಮಾ ಸಂಸ್ಥೆ ಆಯ್ಕೆ ಮಾಡಲಾಗಿದೆ.

ಈ ಯೋಜನೆಗೆ ಒಳಪಡುವ ಮೇಲಿನ ಬೆಳೆಗಳಿಗೆ ಸಾಲ ಪಡೆದ ರೈತರಿಗೆ ಅನುಕೂಲವಾಗುವಂತೆ, 2026ರ ಬೆಳೆ ವಿಮೆ ನೋಂದಾಯಿಸುವ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ್ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ ವಿವರ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಸಂಬಂಧಿಸಿದ ಬ್ಯಾಂಕ್‌ಗಳಿಗೆ ಒದಗಿಸಿ ನೋಂದಣಿ ಮಾಡಿಸಬಹುದು.

ಇದನ್ನೂ ಓದಿ : ಹುಮನಾಬಾದ್‌ | ʼಗುರುಗಂಗಾ ಹಳ್ಳ ಸೇರುತ್ತಿರುವ ವಿಷಕಾರಿ ತ್ಯಾಜ್ಯ : ಕಾರ್ಖಾನೆ ವಿರುದ್ಧ ಬೃಹತ್‌ ಪ್ರತಿಭಟನೆ

ಬೆಳೆ ವಿಮೆ ನೋಂದಣಿಗಾಗಿ ರೈತರು ಕಡ್ಡಾಯವಾಗಿ ಫಾರ್ಮರ್ಸ್ ಐಡಿ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಗ್ರಾಮೀಣ/ಸಹಕಾರಿ ಬ್ಯಾಂಕುಗಳು, ಗ್ರಾಮ ಒನ್ ಸೆಂಟರ್, ಗ್ರಾಹಕ ಸೇವಾ ಕೇಂದ್ರಗಳು, ವಿಮಾ ಸಂಸ್ಥೆಗಳ ಪ್ರತಿನಿಧಿಗಳು ಅಥವಾ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...