ಛತ್ತಿಸ್‌ಘಡ ಮತ ಎಣಿಕೆ | ಅಧಿಕಾರ ಉಳಿಸಿಕೊಳ್ಳುವ ಭರವಸೆಯಲ್ಲಿದೆ ಕಾಂಗ್ರೆಸ್‌

Date:

Advertisements

ಪಂಚರಾಜ್ಯ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ ಮಧ್ಯಾಹ್ನದ ವೇಳೆಗೆ ಹೊರಬೀಳಲಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರಸ್‌ ಮತ್ತು ಅಧಿಕಾರಕ್ಕೇರುವ ಭರವಸೆಯೊಂದಿಗೆ ಮುನ್ನಡೆ ಸಾಧಿಸಿದೆ. ಆದರೂ, 2018ರಲ್ಲಿ ಚುನಾವಣೆಯಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್‌, ಈ ಬಾರಿ ಸರಾಸರಿ 48 ಸ್ಥಾನಗಳಿಗೆ ಕುಸಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ.

ಬಿಜೆಪಿ ಈ ಬಾರಿ ಛತ್ತಿಸ್‌ಗಢವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದೆ. ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿದೆ. ರಾಜ್ಯದ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ ಅವರು ತಮ್ಮ ತವರು ಪಟಾಣ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಬಾರಿಯೂ ಅವರೇ ಮುಖ್ಯಮಂತ್ರಿ ಮುಖವೆಂದು ಹೇಳಲಾಗಿದೆ. ಆದರೆ, ಕಾಂಗ್ರೆಸ್‌ ಅವರೇ ಈ ಬಾರಿಯ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಹೇಳಿಲ್ಲ.

ಅದೇ ರೀತಿ ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್‌ ಅವರು ಬಿಜೆಪಿಯ ಮುಖ್ಯಮಂತ್ರಿ ಮುಖವೆಂದು ಹೇಳಲಾಗಿದೆ. ಆದರೆ, ಬಿಜೆಪಿ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅವರನ್ನು ಅಧಿಕೃತವೆಂದು ಹೇಳಿಲ್ಲ. ಅವರು, ರಮಣ್ ಸಿಂಗ್ ರಾಜನಂದಗಾಂವ್‌ನಿಂದ ಸ್ಪರ್ಧಿಸಿದ್ದಾರೆ. ಇನ್ನು, ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವು ಅವರು ಕಾಂಗ್ರೆಸ್‌ನಿಂದ ಅಂಬಿಕಾಪುರದಲ್ಲಿ ಸ್ಪರ್ಧಿಸಿದ್ದಾರೆ.

Advertisements

ಛತ್ತೀಸ್‌ಗಢದ 90 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.

ಇಂದು (ಡಿ.3) ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತಪತ್ರಗಳ ಮತ ಎಣಿಕೆ ಕಾರ್ಯ ಮುಗಿದಿದೆ. ಅಂಚೆ ಮತಪತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 53 ಸ್ಥಾನಗಳಲ್ಲಿ ಮುಂದಿದೆ. ಬಿಜೆಪಿ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X