ಮಧ್ಯಪ್ರದೇಶ | ಗೆಲುವಿನ ಶ್ರೇಯಸ್ಸು ಮೋದಿಗೆ ಎಂದ ಸಿಎಂ ಚೌಹಾಣ್

Date:

Advertisements

ಮಧ್ಯಪ್ರದೇಶದ ಜನರಿಗೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆ ಇದೆ. ಚುನಾವಣಾ ಗೆಲುವು ಮೋದಿ ಅವರಿಗೆ ಸಲ್ಲುತ್ತದೆ ಎಂದು ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

‘‘ಡಬಲ್ ಇಂಜಿನ್ ಸರ್ಕಾರ,ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಕೆಲಸಗಳನ್ನು ರಾಜ್ಯದ ಜನರಿಗೆ ತಲುಪಿಸಿದ್ದೇವೆ. ರಾಜ್ಯದಲ್ಲಿಯೂ ಜಾರಿಗೆ ತಂದ ಯೋಜನೆಗಳು ಜನರ ಹೃದಯ ಮುಟ್ಟಿವೆ” ಎಂದು ಅವರು ಹೇಳಿದ್ದಾರೆ.

“ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಕೊಡುಗೆ ನೀಡಿದ್ದಾರೆ ಎಂದು ಚೌಹಾಣ್ ಹೇಳಿದ್ದಾರೆ.

Advertisements

ಬಿಜೆಪಿ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಇದು ಡಬಲ್ ಇಂಜಿನ್ ಸರ್ಕಾರದ ಮ್ಯಾಜಿಕ್” ಎಂದಿದ್ದಾರೆ.

“ಇದು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ, ಪ್ರಧಾನಿ ಮೋದಿ ನಾಯಕತ್ವ, ಅಮಿತ್ ಶಾ ಮತ್ತು ಜೆಪಿ ನಡ್ಡಾ, ಮುಖ್ಯಮಂತ್ರಿ ಚೌಹಾಣ್ ಅವರ ಸಂಕಲ್ಪ ಹಾಗೂ ಮಧ್ಯಪ್ರದೇಶದ ಸಾರ್ವಜನಿಕರ ಮೇಲಿನ ಸಮರ್ಪಣೆಯ ಮ್ಯಾಜಿಕ್,” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ 230 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 161 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X