ಬೀದರ್‌ | ಕಮಲನಗರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲು ಒತ್ತಾಯ

Date:

Advertisements

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸುವಂತೆ ವ್ಯವಸ್ಥೆ ಪರಿವರ್ತನೆ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ.

ಈ ಕುರಿತು ವೇದಿಕೆಯ ತಾಲೂಕಾಧ್ಯಕ್ಷ ವೈಜಿನಾಥ ವಡ್ಡೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಮಲನಗರ ತಹಶೀಲ್ದಾರ್‌ ಅಮೀತಕುಮಾರ ಕುಲಕರ್ಣಿ ಅವರಿಗೆ ಸಲ್ಲಿಸಿದರು.

ಕಮಲನಗರ ನೂತನ ತಾಲೂಕು ಘೋಷಣೆಯಾಗಿ ಐದಾರು ವರ್ಷಗಳು ಕಳೆದಿವೆ, ಆದರೂ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭವಾಗಿಲ್ಲ. ಮೊದಲೇ ಬೆಲೆ ಏರಿಕೆಯಿಂದಾಗಿ ಬಡ, ನಿರ್ಗತಿಕ, ಕೂಲಿಕಾರರು ತತ್ತರಿಸಿದ್ದಾರೆ. ಆದರೆ, ರಿಯಾಯಿತಿ ದರದಲ್ಲಿ ಉಪಾಹಾರ ನೀಡುವ ರಾಜ್ಯ ಸರ್ಕಾರದ ಮಹತ್ವದ ಯೋಜನೆ ತಾಲೂಕಿನ ಜನರಿಗೂ ” ಎಂದು ಆಗ್ರಹಿಸಿದರು.

Advertisements

ತಾಲೂಕಿನ ನೂರಾರು ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಅನ್ಯ ಪಟ್ಟಣ, ಗ್ರಾಮಗಳಿಗೆ ತೆರಳುತ್ತಾರೆ. ಬೇರೆ ಬೇರೆ ಗ್ರಾಮಗಳಿಂದ ಕಮಲನಗರದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುತ್ತಾರೆ. ಎಲ್ಲರಿಗೂ ಹೋಟೆಲ್‌ ಗಳಲ್ಲಿ ದುಬಾರಿ ದರದ ಊಟ ಮಾಡುವ ಸಾಮರ್ಥ್ಯ ಇರಲ್ಲ. ಆದ್ದರಿಂದ ಕಡುಬಡವರಿಗೆ ಉಪಯುಕ್ತವಾಗಲೆಂದು ಜಾರಿಗೊಳಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ ಕಮಲನಗರದಲ್ಲಿ ಆರಂಭಿಸಿ ಬಡವರ ಹೊಟ್ಟೆ ತಣಿಸಬೇಕೆಂದು” ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ: ಗೆಲ್ಲುವ ಅವಕಾಶ ಕೈಚೆಲ್ಲಿದ ಕಾಂಗ್ರೆಸ್‌

ಈ ಸಂದರ್ಭದಲ್ಲಿ ಭೀಮರಾವ ಕಣಜೆ, ಪ್ರವೀಣ ಕುಲಕರ್ಣಿ ಸೇರಿದಂತೆ ಇತರರಿದ್ದರು.

ವರದಿ : ಜನಾರ್ಧನ ಸಾವರ್ಗೆಕರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Download Eedina App Android / iOS

X