ಧಾರವಾಡ | ಹೂವಿನ ಬೆಲೆ ಕುಸಿತ; ಸಂಕಷ್ಟದಲ್ಲಿ ಬೆಳೆಗಾರರು

Date:

Advertisements

ಹೂವಿನ ಬೆಲೆ ಭಾರಿ ಕುಸಿತಕಂಡಿದ್ದು,ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬಂದ ಬೆಳೆ ಹೊಲದಲ್ಲೇ ಕಮರುತ್ತಿದೆ. ಸೇವಂತಿ ಕೆ.ಜಿಗೆ 15ರಿಂದ 20 ರೂ. ಚೆಂಡು ಹೂವು ಕೆ.ಜಿಗೆ 10ರೂ.ಗೆ ಇಳಿದರೆ, ಗುಲಾಬಿ ಒಂದು ಕಟ್ಟಿಗೆ 60ರೂಗೆ ಕುಸಿದಿದೆ. ಆದರೆ, ಮಾರುಕಟ್ಟೆಗೆ ಹೂವು ಹೆಚ್ಚು ಬರುತ್ತಿದೆ.

ಬೆಳೆಗಾರರು 25 ಕೆ.ಜಿ ಸೇವಂತಿ ಚೀಲಕ್ಕೆ 200ರೂ. ಚೆಂಡು ಹೂವು ರೂ.100ಕ್ಕೆ ಹರಾಜು ಕೂಗಿದರೂ ಖರೀದಿಗೆ ಖರೀದಿಗೆ ಮುಂದೆ ಬರುತ್ತಿಲ್ಲ. ದೀಪಾವಳಿ ಸಮಯದಲ್ಲಿ ಕೆ.ಜಿ ಸೇವಂತಿ 60ರಿಂದ 80ರೂಪಾಯಿ, ಚೆಂಡು ಹೂವು 50ರಿಂದ 60ರೂ. ಇತ್ತು. ಗುಲಾಬಿ ಕಟ್ಟಿಗೆ ₹100 ಇತ್ತು.

ಧಾರವಾಡ ತಾಲೂಕಿನ ಕುರುಬಗಟ್ಟಿ, ಗೋವನಕೊಪ್ಪ, ಚಂದನಮಟ್ಟಿ, ಜಿರಿಗವಾಡ, ಹಳ್ಳಿಗೇರಿ ಭಾಗದಲ್ಲಿ ರೈತರು ಹೂವು ಬೆಳೆದಿದ್ದಾರೆ. ಈ ಬಾರಿ ಮಳೆ ಕೈಕೊಟ್ಟಿದೆ. ನೀರಾವರಿ ಪ್ರದೇಶಗಳ ಹಲವು ರೈತರು ಹೂವು ಬೆಳೆದಿದ್ದಾರೆ. ಫಸಲು ಚೆನ್ನಾಗಿದೆ. ಆದರೆ, ಬೆಲೆ ಕುಸಿದಿರುವುದರಿಂದ ರೈತರು ನಷ್ಟ ಅನುಭವಿಸುವಂತಾಗಿದೆ.

Advertisements

ಹಬ್ಬ, ಪೂಜೆ, ಗೃಹಪ್ರವೇಶ, ಮದುವೆ, ಸಭೆ-ಸಮಾರಂಭಗಳಿಗೆ ಜನರು ಹೂವು ಖರೀದಿಸುತ್ತಾರೆ. ಈ ಭಾಗದ ರೈತರು ಹುಬ್ಬಳ್ಳಿ, ಧಾರವಾಡ ಮಾರುಕಟ್ಟೆಗೆ ಒಯ್ಯುತ್ತಾರೆ.

ನಾಲ್ಕು ಎಕರೆಯಲ್ಲಿ ಹೂವು ಬೆಳೆದಿದ್ದೇನೆ. ಈವರೆಗೆ 2ಲಕ್ಷ ರೂ. ಖರ್ಚಾಗಿದೆ. ಬೆಳೆ ಚೆನ್ನಾಗಿದೆ. ಕಟಾವು ಮಾಡಲು ತಲಾ 300ರೂ. ಕೂಲಿ ಇದೆ. ಒಮ್ಮೆ ಕಟಾವು ಮಾಡಿದರೆ 7ರಿಂದ 8ಕ್ವಿಂಟಲ್ ಹೂವು ಸಿಗುತ್ತದೆ. ಈಗಿನ ಬೆಲೆಗೆ ಮಾರಾಟ ಮಾಡಿದರೆ ಸಾಗಣೆ, ಕೂಲಿ ವೆಚ್ಚವೂ ಗಿಟ್ಟಲ್ಲ ಎನ್ನುತ್ತಾರೆ ಹೂವು ಬೆಳೆದ ರೈತರು.

‘ಪಾವಳಿ ಹಬ್ಬದಲ್ಲಿ ಎರಡು ದಿನ ಹೂವಿಗೆ ಬೆಲೆ ಚೆನ್ನಾಗಿತ್ತು. ನಂತರ ಕುಸಿದಿದೆ. ಹೊರ ರಾಜ್ಯಗಳಿಗೆ ಕೊಂಡೊಯ್ದು ಮಾರಾಟ ಮಾಡುವುದು ಕಷ್ಟ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ ಹೂವಿನ ಬೆಳೆಗಾರರ ಸ್ಥಿತಿ ಎಂದು ತಮ್ಮ ಬೇಸರ ಹೊರಹಾಕುತ್ತಿದ್ದಾರೆ.

ಹೂವು ಖರೀದಿ ಮಾರಾಟಕ್ಕೆ ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸಬೇಕು. ಇಲ್ಲಿಂದ ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಸಾಗಿಸುವ ವ್ಯವಸ್ಥೆ ಮಾಡಬೇಕು, ಸರ್ಕಾರ ಹೂವು ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X