ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

Date:

Advertisements

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಶಿಯೋ ವಿಧಾನಸಭಾ ಕ್ಷೇತ್ರದಿಂದ 26 ವರ್ಷದ ಸ್ವತಂತ್ರ ಅಭ್ಯರ್ಥಿ ರವೀಂದ್ರ ಸಿಂಗ್ ಭಾಟಿ 32,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ವಿದ್ಯಾರ್ಥಿ ನಾಯಕರಾಗಿದ್ದ ರವೀಂದ್ರ ಸಿಂಗ್ ಭಾಟಿ ಅವರು ಈ ಮೊದಲು ಬಿಜೆಪಿ ಸೇರಿಸಿದ್ದರು. ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡಲು ಪಕ್ಷವು ನಿರಾಕರಿಸಿದಾಗ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ರಾಜಸ್ಥಾನದ ಶಿಯೋ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮತ ಎಣಿಕೆಯ 25 ಸುತ್ತು ಮುಗಿದಿರುವ ಕ್ಷೇತ್ರದಲ್ಲಿ ಭಾರಿ ಅಂತರದಲ್ಲಿ ಮುಂದಿರುವ ರವೀಂದ್ರ ಸಿಂಗ್ ಭಾಟಿ ಬಹುತೇಕ ಗೆಲುವಿನ ಸಮೀಪದಲ್ಲಿದ್ದಾರೆ. ಮತ ಎಣಿಕೆಯಲ್ಲಿ ಇವರ ಸಮೀಪದ ಸ್ಪರ್ಧಿ ಮತ್ತೊಬ್ಬ ಸ್ವತಂತ್ರ ಸ್ಪರ್ಧಿ ಫತಾ ಖಾನ್ ಅವರು 46 ಸಾವಿರ ಮತ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

Advertisements

ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಅಮೀನ್‌ ಖಾನ್ 40 ಸಾವಿರ ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಕೇವಲ 11 ಸಾವಿರ ಮತ ಗಳಿಸಿರುವ ಬಿಜೆಪಿ ಅಭ್ಯರ್ಥಿ ಸ್ವರೂಪ್‌ ಸಿಂಗ್‌ ಠೇವಣಿ ಕಳೆದುಕೊಳ್ಳುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರವೀಂದ್ರ ಸಿಂಗ್ ಭಾಟಿ ವಿದ್ಯಾರ್ಥಿ ನಾಯಕರಾಗಿದ್ದಾಗ ವಿದ್ಯಾರ್ಥಿಗಳ ಹಕ್ಕುಗಳ ಬಗ್ಗೆ ದನಿಯೆತ್ತಿದ್ದರು. ಈ ಹೋರಾಟವು ಅವರನ್ನು ಕ್ಷೇತ್ರದ ಮತದಾರರಲ್ಲಿ ಬಹಳ ಜನಪ್ರಿಯಗೊಳಿಸಿತು. ವಿದ್ಯಾರ್ಥಿ ಸಮಸ್ಯೆಗಳ ಬಗ್ಗೆ ರ್ಯಾಲಿಗಳು, ಅಭಿಯಾನ ಕೈಗೊಂಡಿದ್ದರು. ಭಾಟಿ ಅವರ ಹೋರಾಟದ ವಿಡಿಯೋವನ್ನು ಕ್ಷೇತ್ರದ ಜನರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲು ಪ್ರಾರಂಭಿಸಿದರು.

ರಾಜಸ್ಥಾನದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರಗಳು ಬದಲಾಗುತ್ತವೆ. ಇದು 1993 ರಿಂದ ನಡೆಯುತ್ತಿರುವ ವಿದ್ಯಮಾನವಾಗಿದೆ. ಮತ ಎಣಿಕೆಯ ಇತ್ತೀಚಿನ ವರದಿಗಳಂತೆ ಬಿಜೆಪಿ 113, ಕಾಂಗ್ರೆಸ್ 74, ಬಿಎಸ್‌ಪಿ 2 ಹಾಗೂ ಇತರರು 11 ಕ್ಷೇತ್ರಗಳಲ್ಲಿ ಮುಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X