ಚಿಕ್ಕಮಗಳೂರು | ವಕೀಲನ ಮೇಲೆ ಪೊಲೀಸ್ ದೌರ್ಜನ್ಯದ ತನಿಖೆ ಸಿಐಡಿ ಹೆಗಲಿಗೆ

Date:

Advertisements

ಚಿಕ್ಕಮಗಳೂರು ನಗರ ಪೊಲೀಸ್​ ಠಾಣೆಯಲ್ಲಿ ಯುವ ವಕೀಲನೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಇಂದು(ಡಿ.3) ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿಲಾಗಿದೆ ಎಂದು ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪೊಲೀಸರು ಬೈಕ್‌ನಲ್ಲಿ ಬುರತ್ತಿದ್ದಾಗ ಹೆಲ್ಮೆಟ್ ಹಾಕದ ವಿಚಾರಕ್ಕೆ ಸಂಬಂಧಿಸಿದಂತೆ ಯುವ ವಕೀಲ ಪ್ರೀತಮ್ ಎಂಬುವವರ ಮೇಲೆ ಪಿಎಸ್​ಐ, ಎಎಸ್ಐ, ಹೆಡ್ ಕಾನ್​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಇದನ್ನು ಖಂಡಿಸಿ ವಕೀಲರು ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದಾದ ಬೆನ್ನಲ್ಲೇ ಆರು ಮಂದಿ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದ್ದಲ್ಲದೇ, ಸೇವೆಯಿಂದ ಕೂಡ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಹೈಕೋರ್ಟ್‌ ಕೂಡ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.

Advertisements

ಈ ನಡುವೆ, ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಎದುರಲ್ಲೇ ಆಕ್ರೋಶ ಹೊರಹಾಕಿದ್ದರು.

ಪೊಲೀಸರ ಪ್ರತಿಭಟನೆ ಕೂಡ ತೀವ್ರವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?
ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30ರಂದು ಹೆಲ್ಮೆಟ್ ಹಾಕದ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್, ಒಬ್ಬ ಎಎಸ್​ಐ, ಒಬ್ಬ ಹೆಡ್ ಕಾಸ್​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ತಲೆಮರೆಸಿಕೊಂಡಿದ್ದು, ಇವರ ಬಂಧನಕ್ಕೆ ಚಿಕ್ಕಮಗಳೂರು ಡಿವೈಎಸ್‌ಪಿ ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಈ ಪ್ರಕರಣವೀಗ ವಕೀಲರು V/s ಪೊಲೀಸ್ ಆಗಿ ಪರಿವರ್ತನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X