ಬೆಳಗಾವಿ ಅಧಿವೇಶನ | ಸಮಯಕ್ಕೆ ಸರಿಯಾಗಿ ಬರುವ ಶಾಸಕರಿಗೆ ಉಡುಗೊರೆ: ಸ್ಪೀಕರ್

Date:

Advertisements

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ದಿನನಿತ್ಯ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಸಮಯಕ್ಕೆ ಸರಿಯಾಗಿ ಬರುವ ಶಾಸಕರಿಗೆ ಕಾಫಿ ಕಪ್ಅನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

“ಕಳೆದ ಬಾರಿಯೂ ಸಮಯಕ್ಕೆ ಸರಿಯಾಗಿ ಬಂದವರಿಗೆ ಉಡುಗೊರೆ ನೀಡುವುದಾಗಿ ಮತ್ತು ಅವರ ಹೆಸರನ್ನು ಘೋಷಿಸುವುದಾಗಿ ಹೇಳಿದ್ದೆವು. ಹಲವರು ಸರಿಯಾದ ಸಮಯಕ್ಕೆ ಸದನದಲ್ಲಿ ಹಾಜರಿದ್ದರು. ಅವರನ್ನು ಪ್ರೋತ್ಸಾಹಿಸಲಾಗಿತ್ತು. ಈ ಬಾರಿಯೂ ಉಡುಗೊರೆ ನೀಡುತ್ತೇವೆ” ಎಂದು ಹೇಳಿದ್ದಾರೆ.

ಸಚಿವ ಜಮೀರ್ ಅವರ ಹೇಳಿಕೆ ಬಗ್ಗೆ ಮಾತನಾಡಿದ ಖಾದರ್, “ಚುನಾವಣಾ ಸಮಯದ ರಾಜಕೀಯ ಹೇಳಿಕೆಗೆ ನಾನು ಉತ್ತರ ಕೊಟ್ಟಿದ್ದೇನೆ. ವಿಪಕ್ಷದವರೂ ಅವರ ಹೇಳಿಕೆ ನೀಡಿದ್ದಾರೆ. ಅದನ್ನು ಅಧಿವೇಶನಕ್ಕೆ ತರಬಾರದು. ಸದನದ ಅವಧಿಯನ್ನು ಅಭಿವೃದ್ಧಿ ಕುರಿತ ಚರ್ಚೆಗಳಿಗಾಗಿ ಬಳಸಿಕೊಳ್ಳಬೇಕು” ಎಂದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X