ಬೆಳಗಾವಿ | ಮಹಾಮೇಳಾವ್‌ಗೆ ಅನುಮತಿ ನಿರಾಕರಣೆ; ಗಡಿ ಪ್ರವೇಶಕ್ಕೆ ಎಂಇಎಸ್‌ ಯತ್ನ

Date:

Advertisements

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ವೇಳೆ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ. ಆದರೂ, ಸೋಮವಾರ ಕರ್ನಾಟಕ ಗಡಿ ಪ್ರವೇಶಿಸಲು ಎಂಇಎಸ್‌ ಕಾರ್ಯಕರ್ತರು ಯತ್ನಿಸಿದ್ದು, ಅವರನ್ನು ಪೊಲೀಸರು ತಡೆದಿದ್ದಾರೆ,

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ನಿರಂತರ ಹೇಳುತ್ತಲೇ ಬಂದಿರುವ ಎಂಇಎಸ್‌, ಕನ್ನಡ ರಾಜ್ಯೋತ್ಸವ, ಬೆಳಗಾವಿ ಅಧಿವೇಶನದ ಸಮಯದಲ್ಲಿ ತಗಾದೆ ತೆಗೆಯುತ್ತಲೇ ಬಂದಿದೆ. ಈಗ, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ಮಹಾಮೇಳಾವ್ ನಡೆಸಲು ಮುಂದಾಗಿತ್ತು.

ಆದರೆ, ಬೆಳಗಾವಿ ಜಿಲ್ಲಾಧಿಕಾರಿಗಳು ಮಹಾವೇಳಾವ್‌ಗೆ ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ, ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಗಡಿ ಗ್ರಾಮ ಶಿನೋಳಿಯಲ್ಲಿ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Advertisements

ಪ್ರತಿಭಟನೆಗೂ ಮುನ್ನ ಕರ್ನಾಟಕ ಗಡಿ ಪ್ರವೇಶಿಸಲು ಎಂಇಎಸ್‌ ಕಾರ್ಯಕರ್ತರು ಯತ್ನಿಸಿದ್ದಾರೆ. ಅವರನ್ನು ಗಡಿಯಲ್ಲಿಯೇ ಪೊಲೀಸರು ತಡೆದಿದ್ದಾರೆ. ಬಳಿಕ, ಬೆಳಗಾವಿ-ವೆಂಗುರ್ಲಾ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗಾವಿ ನಗರದಲ್ಲಿ 144 ಸೆಕ್ಷನ್‌ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X