ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ವಿಶ್ವ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಜೆ.ಬಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಗ್ಗದಾಸಪುರ ಮುಖ್ಯ ರಸ್ತೆಯ ವರ್ಸೋವಾ ಲೇಔಟ್ಬಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಸೇತುವೆ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಈ ಹಿನ್ನೆಲೆ, ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವ ಸಲುವಾಗಿ ಕೆಲವು ಮಾರ್ಗಸೂಚಿ ನೀಡಿದ್ದಾರೆ.

“ಕಾಮಗಾರಿಯ ಸಮಯದಲ್ಲಿ ಪೂರ್ವಂಕರ ಅಪಾರ್ಟ್ಮೆಂಟ್‌ನಿಂದ ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು, ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ಹಾಗೂ ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ” ಎಂದು ಬೆಂಗಳೂರು ಸಂಚಾರ ಪೊಲೀಸ್ ಮಾಹಿತಿ ನೀಡಿದೆ.

“ಕಾಮಗಾರಿಯ ಸಮಯದಲ್ಲಿ ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ವಾಹನಗಳು ಪೂರ್ವಂಕರ ಅಪಾರ್ಟ್ಮೆಂಟ್ ಎದುರಿನ ಬೈರಸಂದ್ರ 5ನೇ ಕ್ರಾಸ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು, ಬೈರಸಂದ್ರ ಮುಖ್ಯ ರಸ್ತೆಯ ಮೂಲಕ ಜಿ.ಎಂ.ಪಾಳ್ಯ ಜಂಕ್ಷನ್ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ” ಎಂದು ತಿಳಿಸಿದೆ.

Advertisements

ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳು ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಕಗ್ಗದಾಸಪುರ ಮುಖ್ಯ ರಸ್ತೆ ವಿಜ್ಞಾನ ನಗರ ಜಂಕ್ಷನ್ಬಲತಿರುವು ಜಿ.ಎಂ ಪಾಳ್ಯ ಮುಖ್ಯ ರಸ್ತೆಬೆಮೆಲ್ ಜಂಕ್ಷನ್ ಬಲ ತಿರುವುಗೀತಾಂಜಲಿ ಲೇಔಟ್ ಜಂಕ್ಷನ್ ಬಲ ತಿರುವು ಪಡೆದು ಡಿ.ಆರ್.ಡಿ. ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಬಹುದು ಅಥವಾ ಜಿ.ಎಂ.ಪಾಳ್ಯ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಬೈರಸಂದ್ರ ಮುಖ್ಯ ರಸ್ತೆ ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಬಿಬಿಎಂಪಿ ಕೈಗೆತ್ತಿಕೊಂಡಿರುವ ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಪೂರ್ವಂಕರ ಅಪಾರ್ಟ್ಮೆಂಟ್ನಿಂದ ಕಗ್ಗದಾಸಪುರ ರೈಲ್ವೆ ಗೇಟ್ ನಿಲ್ದಾಣದವರೆಗೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X