ಬೆಳಗಾವಿ ಅಧಿವೇಶನ | ‘ಪೋಡಿ ಮುಕ್ತ ಗ್ರಾಮ’ ಸಾಧಿಸುವವರೆಗೆ ಸುಮ್ಮನಿರೋಲ್ಲ: ಕೃಷ್ಣಬೈರೇಗೌಡ ಭರವಸೆ

Date:

Advertisements
  • ಯಾವುದಾದರೂ ಮಾರ್ಗ ಹುಡುಕಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ
  • ಸರ್ಕಾರವೇ ಹಳ್ಳಿಗೆ ತೆರಳಿ ಅಭಿಯಾನದ ಮಾದರಿಯಲ್ಲಿ ಪೋಡಿ ಮುಕ್ತಗ್ರಾಮ

ರಾಜ್ಯಾದ್ಯಂತ ಪೋಡಿಗೆ ಸಂಬಂಧಿಸಿದಂತೆ ಶೇ.70 ರಷ್ಟು ಬಗೆಹರಿಸಬಹುದಾದ ಸಮಸ್ಯೆಯಾಗಿದ್ದು ನಾವೇ ಪ್ರತಿ ಹಳ್ಳಿಗೂ ಹೋಗಿ “ಪೋಡಿ ಮುಕ್ತ ಗ್ರಾಮ” ಯೋಜನೆಯನ್ನು ಅಭಿಯಾನದ ರೀತಿಯಲ್ಲಿ ನಡೆಸಲಿದ್ದೇವೆ. ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಂಕಲ್ಪ ಮಾಡಿದ್ದೇವೆ ಎಂದು ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು.

ಬೆಳಗಾವಿ ಅಧಿವೇಶನದ ಮೊದಲ ದಿನ “ಪೋಡಿ ಮುಕ್ತ ಗ್ರಾಮ” ಬಗೆಗಿನ ವಿರೋಧ ಪಕ್ಷದ ಶಾಸಕ ಸಿ ಎನ್ ಅಶ್ವತ್ಥನಾರಾಯಣ ಅವರ ಪ್ರಶ್ನೆಗೆ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಿಸಿದರು.

“ಪೋಡಿ ಬಾಕಿ ಪ್ರಕರಣಗಳಿಂದಾಗಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲೂ ಸಹ ರೈತರ ಪೋಡಿ ಸಮಸ್ಯೆಗಳ ಸಂಖ್ಯೆಯೇ ಹೆಚ್ಚಾಗಿ ಕಂಡು ಬಂದಿದೆ. ಹೀಗಾಗಿ ಪೋಡಿ ಮುಕ್ತ ಗ್ರಾಮಕ್ಕೆ ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಅಭಿಯಾನದ ಮಾದರಿಯಲ್ಲಿ ಶೀಘ್ರ ನಾವೇ ಗ್ರಾಮಗಳಿಗೆ ತೆರಳಿ ರೈತರಿಗೆ ಪೋಡಿ ಮಾಡಿಕೊಡುತ್ತೇವೆ” ಎಂದು ಭರವಸೆ ನೀಡಿದರು.

Advertisements

“ಪೋಡಿ ಮುಕ್ತ ಗ್ರಾಮ ಯೋಜನೆ ಆರಂಭವಾದದ್ದು 2015ರಲ್ಲಿ. ಆ ವರ್ಷ 1791 ಹಳ್ಳಿಗಳನ್ನು ಪೋಡಿ ಮುಕ್ತ ಗ್ರಾಮ ಎಂದು ಘೋಷಿಸಲಾಗಿತ್ತು. 2017 ರಲ್ಲಿ 1634, 2018 ರಲ್ಲಿ 4337. 2019 ರಲ್ಲಿ 4647, 2020 ರಲ್ಲಿ 2977, 2021ರಲ್ಲಿ 1016 ಹಾಗೂ 2022ರಲ್ಲಿ 228 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಈವರೆಗೆ ಒಟ್ಟಾರೆ 16,430 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಇನ್ನೂ 16,085 ಗ್ರಾಮಗಳು ಬಾಕಿ ಇವೆ. ಹಿಂದಿನ ವರ್ಷಗಳ ಸಾಧನೆಗೆ ಹೋಲಿಸಿದರೆ ಕಳೆದ ಮೂರು ವರ್ಷದಿಂದ ಪೋಡಿ ಮುಕ್ತ ಗ್ರಾಮ ಯೋಜನೆಯ ಸಾಧನೆ ಸಮಾಧಾನಕರವಾಗಿಲ್ಲ. ಹೀಗಾಗಿ ಸಾಧ್ಯವಾದಷ್ಟು ಶೀಘ್ರದಲ್ಲಿ ಈ ಪ್ರಕರಣಗಳನ್ನೂ ಇತ್ಯರ್ಥ ಮಾಡಲು ಕಂದಾಯ ಇಲಾಖೆ ಬದ್ದವಾಗಿದೆ. ಈ ಬಗ್ಗೆ ಸರ್ವೇ ಇಲಾಖೆಗೂ ಅಗತ್ಯ ಸೂಚನೆ ನೀಡಲಾಗಿದೆ” ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಅಧಿವೇಶನ | ಡಿಸೆಂಬರ್‌ ಬದಲು ಜನವರಿ 23ಕ್ಕೆ ಪಿಎಸ್‌ಐ ಮರು ಪರೀಕ್ಷೆ, ಪರಮೇಶ್ವರ್‌ ಘೋಷಣೆ

ಪೋಡಿ ಸಮಸ್ಯೆಯ ಹಿಂದಿನ ಕಾರಣಗಳ ಬಗ್ಗೆಯೂ ಸದನದಲ್ಲಿ ಚರ್ಚಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ರೈತರ ಹೆಸರಲ್ಲಿ ಆರ್‌ಟಿಸಿ ಇದೆ. ಆದರೆ, ಸರ್ವೇ, ನಕ್ಷೆ ಮತ್ತು ಹಕ್ಕಿನ ದಾಖಲೆಗಳನ್ನು ನೀಡಲಾಗಿಲ್ಲ. ಅಲ್ಲದೆ, ಭೂಮಿಯ ವಿಸ್ತೀರ್ಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪಹಣಿಗಳಿರುವುದು ಪೋಡಿ ಸಮಸ್ಯೆ ಬಗೆಹರಿಯದೆ ಇರುವುದಕ್ಕೆ ಮುಖ್ಯ ಕಾರಣ. ಆದರೂ, ರಾಜ್ಯಾದ್ಯಂತ ಇರುವ ಶೇ.70 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸಬಹುದು” ಎಂದರು.

“ಈ ಪ್ರಕರಣಗಳಲ್ಲಿ ಯಾವುದಾದರೂ ಮಾರ್ಗ ಹುಡುಕಿ ರೈತರ ಸಮಸ್ಯೆಯನ್ನು ತುರ್ತು ಬಗೆಹರಿಸಿ ಎಂದು ನಾನು ಈಗಾಗಲೇ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ, ಉಳಿದ ಶೇ.30 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಪರಿಹಾರ ಕೆಲಸಕ್ಕೆ ಕೈಹಾಕುತ್ತಿದ್ದಂತೆ ತಕರಾರುಗಳು ಎದುರಾಗುತ್ತವೆ. ಇವನ್ನೂ ಸಹ ಎದುರುಗೊಳ್ಳಲು ನಾವು ಸಿದ್ದರಿದ್ದೇವೆ” ಎಂದರು.

ಪರವಾನಗಿ ಹೊಂದಿರುವ 1800 ಭೂಮಾಪಕರ ನೇಮಕ!

ಪೋಡಿ ಮುಕ್ತ ಗ್ರಾಮ ಯಶಸ್ವಿಯಾಗದಿರುವುದಕ್ಕೆ ಮಾನವ ಸಂಪನ್ಮೂಲ ಕೊರತೆಯೂ ಕಾರಣ ಎಂದು ಸದನದಲ್ಲಿ ತಿಳಿಸಿದ ಸಚಿವರು, “ಈಗಾಗಲೇ ಪರವಾನಗಿ ಹೊಂದಿರುವ 1800 ಭೂ ಮಾಪಕರು (ಸರ್ವೇಯರ್) ಗಳನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ 364 ಸರ್ಕಾರಿ ಭೂಮಾಪಕರು ಹಾಗೂ 27 ಎಡಿಎಲ್‌ಆರ್‌ಗಳನ್ನೂ ಸಹ ನೇಮಕ ಮಾಡಲಾಗಿದೆ. ಮಾನವ ಸಂಪನ್ಮೂಲಗಳನ್ನು ಹೆಚ್ಚು ಮಾಡಿಕೊಂಡು ಪೋಡಿ ಸಮಸ್ಯಗಳಿಗೆ ಪರಿಹಾರ ನೀಡುವುದಕ್ಕೆ ನಾವು ಸಂಕಲ್ಪ ಮಾಡಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X