ವಿಜಯಪುರ | ಕ್ಯಾಂಪಸ್‌ಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್; ಎಐಡಿಎಸ್‌ಒ ವಿರೋಧ

Date:

Advertisements

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವ ಯುಜಿಸಿ ಸೂಚನೆಯನ್ನು ಎಐಡಿಎಸ್ಒ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಮುಖಂಡೆ ಕಾವೇರಿ ರಜಪೂತ, “ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್ ಗಳನ್ನು ಸ್ಥಾಪಿಸಲು ಯುಜಿಸಿಯು ಸೂಚನೆ ನೀಡಿದೆ. ಆಡಳಿತ ಪಕ್ಷದ ನಾಯಕರಿಗೆ ಪ್ರಚಾರ ನೀಡುವ ಯುಜಿಸಿ ಸೂಚನೆಯು ಅಪ್ರಜಾತಾಂತ್ರಿಕವಾಗಿದೆ” ಎಂದು ಹೇಳಿದ್ದಾರೆ.

“ದೇಶದ ಶೈಕ್ಷಣಿಕ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದರ ಬದಲು, ಒಬ್ಬ ನಾಯಕರ ವ್ಯಕ್ತಿ ಪೂಜೆ, ಒಂದು ವಿಚಾರಧಾರೆ ಸೇರಿದಂತೆ ಏಕಮುಖ ಚಿಂತನೆಯಲ್ಲಿ ದೇಶದ ವಿದ್ಯಾರ್ಥಿ ಯುವಜನತೆಯನ್ನು ಮುಳುಗಿಸುವ ಅಪಾಯಕಾರಿ ಫ್ಯಾಸಿವಾದಿ ನಡೆ ಇದಾಗಿದೆ” ಎಂದು ಅವರು ಹೇಳಿದ್ದಾರೆ.

Advertisements

“ಇಂತಹ ರಾಜಕೀಯದ ಬದಲು ಶಿಕ್ಷಣದ ವ್ಯಾಪಾರಿಕರಣ, ಖಾಸಗಿಕರಣ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮುಚ್ಚುವಿಕೆ ಸೇರಿದಂತೆ ದೇಶದ ಶಿಕ್ಷಣ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಯುಜಿಸಿ ಮಾಡಬೇಕು. ಯಾವುದೋ ಒಬ್ಬ ರಾಜಕೀಯ ನಾಯಕರನ್ನು ಬಿಂಬಿಸುವ ಬದಲಿಗೆ ದೇಶದ ಶಿಕ್ಷಣದ ಏಳಿಗೆಗಾಗಿ ಶ್ರಮಿಸಿದ ನವೋದಯ ಹರಿಕಾರರಾದ ಈಶ್ವರ ಚಂದ್ರ ವಿದ್ಯಾಸಾಗರ್, ರಾಜಾರಾಮ್ ಮೋಹನ ರಾಯ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಹಾಗೂ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮುಂತಾದವರ ಚಿಂತನೆಗಳನ್ನು ವಿದ್ಯಾರ್ಥಿಗಳ ಮಧ್ಯ ಹರಡುವ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X