ದಕ್ಷಿಣ ಕನ್ನಡ | ಆಯುಷ್ಮಾನ್ ಭಾರತ್ ಸೌಲಭ್ಯವಿದ್ದರೂ ಅಧಿಕ ಶುಲ್ಕ ವಸೂಲಿ; 16 ದೂರು ದಾಖಲು

Date:

Advertisements

‘ಆಯುಷ್ಮಾನ್ ಭಾರತ್’ ಮತ್ತು ‘ಆರೋಗ್ಯ ಕರ್ನಾಟಕ’ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ನಿಗದಿತ ಸೌಲಭ್ಯ ಕೊಡುತ್ತಿಲ್ಲ. ಯೋಜನೆಯ ಸೌಲಭ್ಯ ಪಡೆಯಲು ಅರ್ಹವಾಗಿದ್ದರೂ ಹೆಚ್ಚುವರಿ ಮೊತ್ತವನ್ನು ರೋಗಿಗಳಿಂದಲೇ ಪಡೆಯಲಾಗುತ್ತಿದೆ ಎಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಳಿಬಂದಿದೆ.

ಈ ಸಂಬಂಧ ಕಳೆದ ಮಾರ್ಚ್‌ನಿಂದ ಇಲ್ಲಿಯವರೆಗೆ ಒಟ್ಟು 16 ದೂರುಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್.ಎಂ.ಪಿ ಅವರು ನಡೆಸಿದ ಆಯುಷ್ಮಾನ್ ಯೋಜನೆಯ ಕುಂದು ಕೊರತೆ ನಿವಾರಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisements

“ಆಯುಷ್ಮಾನ್ ಭಾರತ್ ಯೋಜನೆಯಡಿ ದಾಖಲಾದ ರೋಗಿಗಳಿಗೆ ಯೋಜನೆಯಡಿ ಬರುವ ಎಲ್ಲ ಸೌಲಭ್ಯಗಳು ಆಸ್ಪತ್ರೆಗಳು ಒದಗಿಸಲೇಬೇಕು. ಅದೇ ರೀತಿ ಸರ್ಕಾರ ನಿಗದಿಪಡಿಸಿದ ಮೊತ್ತವನ್ನೇ ಪಡೆಯಬೇಕು. ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ” ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ತಿಳಿಸಿದ್ದಾರೆ.

“ಆದರೂ, ನಿಯಮ ಮೀರಿ ರೋಗಿಗಳಿಂದ ಹಣ ಪಡೆಯಲಾಗಿದೆ. ಈ ಸಂಬಂಧ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಒಟ್ಟು 16 ದೂರುಗಳು ಬಂದಿವೆ. ಈ ಪೈಕಿ 9 ಪ್ರಕರಣವನ್ನು ಜಿಲ್ಲಾ ಆರೋಗ್ಯಧಿಕಾರಿ ಹಂತದಲ್ಲಿ ಇತ್ಯರ್ಥ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ಆಯುಷ್ಮಾನ್ ಯೋಜನೆಯಡಿ ರೋಗಿಗಳಿಗೆ ಸಮರ್ಪಕ ಸೇವೆ ಆಸ್ಪತ್ರೆಗಳು ನೀಡಬೇಕು. ಯಾವುದೇ ದೂರುಗಳು ಬಾರದಂತೆ ರೋಗಿಗಳೊಂದಿಗೆ ವ್ಯವಹರಿಸಬೇಕು” ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಮುಕುಲ್ ಜೈನ್, ಆಯುಷ್ಮಾನ್ ಭಾರತ್ ನೋಡಲ್ ಅಧಿಕಾರಿ ಡಾ.ಸುದರ್ಶನ್, ಪ್ರಾದೇಶಿಕ ಸಮನ್ವಯ ಅಧಿಕಾರಿಗಳಾದt ಡಾ.ಯಶಸ್ವಿನಿ, ಡಾ.ನೌಷಾದ್ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X