4 ರಾಜ್ಯಗಳಲ್ಲಿ ಬಿಜೆಪಿಗಿಂತ ಕಾಂಗ್ರೆಸ್‌ಗೆ ಹೆಚ್ಚು ಮತ: ‘ಕೈ’ ಪಕ್ಷದ ಮೇಲೆ ಜನರಿಗೆ ಹೆಚ್ಚು ನಂಬಿಕೆ

Date:

Advertisements

ಉತ್ತರದ ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತಿದ್ದರೂ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸರ್ಕಾರ ರಚಿಸಲು ಸಜ್ಜಾಗಿರುವ ಬಿಜೆಪಿಗಿಂತ ಪಕ್ಷವು 9.44 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಹರಿಪ್ರಸಾದ್, ಮತದಾರರು ಪಕ್ಷವನ್ನು ಅಧಿಕಾರಕ್ಕೆ ತರಲಿಲ್ಲ, ಆದರೆ ಬಿಜೆಪಿಗಿಂತ ಹೆಚ್ಚು ಮತಗಳನ್ನು ನೀಡುವ ಮೂಲಕ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಚುನಾವಣೆಯಲ್ಲಿ ನಾವು ಅಧಿಕಾರದಿಂದ ದೂರ ಇದ್ದೇವೆ, ಆದರೆ ಜನರ ನಂಬಿಕೆ ಮತ್ತು ಪ್ರೀತಿಯಿಂದಲ್ಲ. ನಮ್ಮ ಪಕ್ಷಕ್ಕೆ ಜನರು ಅಧಿಕಾರ ನೀಡದೆ ಇರಬಹುದು, ಆದ್ರೆ ಮನದಾಳದಿಂದ ಮತ ನೀಡಿದ್ದಾರೆ. ಅವರಿಗೆ ತಲೆಬಾಗಿದ್ದೇವೆ, ಕೃತಜ್ಞರಾಗಿದ್ದೇವೆ ಎಂದು ತಿಳಿಸಿದ್ದಾರೆ.

Advertisements

ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ 49,077,907 ಮತಗಳನ್ನು ಗಳಿಸಿದರೆ, ಬಿಜೆಪಿ 48,133,463 ಮತಗಳನ್ನು ಗಳಿಸಿದೆ. ಬಿಜೆಪಿಯ ರಾಜಕೀಯ ಧ್ರುವೀಕರಣ ಮತ್ತು ದ್ವೇಷದಿಂದ ಕಾಂಗ್ರೆಸ್ ಸೋತಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

“ನಾಲ್ಕು ರಾಜ್ಯಗಳಲ್ಲಿ ಅಧಿಕಾರದಲ್ಲಿಲ್ಲದಿದ್ದರೂ, ಸಾರ್ವಜನಿಕರ ಕುಂದುಕೊರತೆಗಳಿಗೆ ಪಕ್ಷ ಸ್ಪಂದಿಸುತ್ತದೆ ಮತ್ತು ಬಿಜೆಪಿಯು ಪ್ರಚಾರ ಮಾಡುತ್ತಿರುವ ಕೋಮುವಾದಿ ರಾಜಕಾರಣದ ವಿರುದ್ಧ ಹೋರಾಡುತ್ತದೆ” ಎಂದು ಅವರು ಹೇಳಿದರು.

“ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಶೇ 46.27, ಕಾಂಗ್ರೆಸ್‌ಗೆ ಶೇ. 42.23, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಶೇ. 48.55, ನಮ್ಮ ಪಕ್ಷಕ್ಕೆ ಶೇ. 40.40, ರಾಜಸ್ಥಾನದಲ್ಲಿ ಶೇ. 41.69 ಕಾಂಗ್ರೆಸ್‌ಗೆ ಶೇ. 39.53 ಮತ ಬಂದಿದೆ. ಬಹುತೇಕ ರಾಜ್ಯಗಳಲ್ಲಿ ಬಿಜೆಪಿಯನ್ನು ಸರಾಸರಿ ಶೇ 50ರಷ್ಟು ಮತದಾರರು ನಿರಾಕರಿಸಿರುವುದು ಸ್ಪಷ್ಟ. ನಾವು ಅಧಿಕಾರದಿಂದ ದೂರ ಇದ್ದರೂ, ಜನರ ಬದುಕು ಬವಣೆಗಳ ಬಗ್ಗೆ ಧ್ವನಿಯಾಗುತ್ತೇವೆ. ದ್ವೇಷ ರಾಜಕೀಯದ ವಿರುದ್ಧ ಪ್ರೀತಿ ವಿಶ್ವಾಸದ ರಾಜಕೀಯ ಮುಂದುವರೆಸುತ್ತೇವೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಮತ್ತೆ ಭಾರತವನ್ನು ಒಗ್ಗೂಡಿಸುತ್ತೇವೆ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X