ಹಾಸನ | ‘ಅರ್ಜುನ’ನ ಅಂತ್ಯಕ್ರಿಯೆ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ

Date:

Advertisements

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ‘ಅರ್ಜುನ’ ಆನೆಯ ಅಂತ್ಯಕ್ರಿಯೆಗಾಗಿ ಗುಂಡಿ ತೆಗೆಯುತ್ತಿದ್ದ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಆನೆ ‘ಅರ್ಜುನ’ ಸೋಮವಾರ ಮೃತಪಟ್ಟಿದೆ. ಗ್ರಾಮದ ಬಳಿಯೇ ಆನೆಯ ಅಂತ್ಯಕ್ರಿಯೆ ಮಾಡಲಾಗಿದೆ.

ಆನೆಯನ್ನು ಹೂಳಲು ಗುಂಡಿ ತೆಗೆಯುತ್ತಿದ್ದಾಗ, ಅರಣ್ಯ ಇಲಾಖೆಯ ಸಿಬ್ಬಂದಿಗಳ ಪ್ರಮಾದದಿಂದಲೇ ಆನೆ ಮೃತಪಟ್ಟಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಗುಂಡಿ ತೆಗೆಯಲು ಅಡ್ಡಿಪಡಿಸಿದ್ದಾರೆ.

Advertisements

ಲಾಠಿ ಪ್ರಹಾರ ನಡೆಸಿರುವ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

“ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಇಂಜೆಕ್ಷನ್‌ ಶೂಟ್ ಮಾಡಲಾಗಿತ್ತು. ಅದು ಗುರಿ ತಪ್ಪಿ ಪ್ರಶಾಂತ್‌ ಎಂಬ ಸಾಕಾನೆ ಮೇಲೆ ಬಿತ್ತು. ನಂತರ, ಬೇರೊಂದು ಇಂಜೆಕ್ಷನ್‌ ನೀಡಿ ಅದನ್ನು ಸುಧಾರಿಸಲಾಯಿತು. ಆ ವೇಳೆಗೆ, ಕಾಡಾನೆ ಮೇಲೆ ಅರ್ಜುನ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರು. ಆ ಗುಂಡು ಅಚಾನಕ್ಕಾಗಿ ಅರ್ಜುನನ ಕಾಲಿಗೆ ಬಿದ್ದಿತು. ಗುಂಡು ತಗುಲಿದ್ದರಿಂದ ಅರ್ಜುನ ಸುತ್ತಮುತ್ತಲಿದ್ದ ಮರಗಳನ್ನು ಬೀಳಿಸಿತು. ಅರ್ಜುನ ಆನೆ ನಡೆಯಲಾಗದ ಪರಿಸ್ಥಿತಿಯಲ್ಲಿತ್ತು. ಈ ವೇಳೆ, ಕಾಡಾನೆ ಅರ್ಜುನನ ಮೇಲೆ ದಾಳಿ ಮಾಡಿತು” ಎಂದು ಮಾವುತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X