ಬೀದರ್‌ | ನಕಲಿ ವೈದ್ಯರ ಕ್ಲಿನಿಕ್, ಲ್ಯಾಬ್ ಮೇಲೆ ದಾಳಿ

Date:

Advertisements

ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

“ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ ನೋಂದಣಿ ಮಾಡದೆ ಕ್ಲಿನಿಕ್ ನಡೆಸುತ್ತಿರುವ 2 ಕ್ಲಿನಿಕ್‌ಗಳಿಗೆ ಕೆ.ಪಿ.ಎಂ.ಇ. ಅಡಿಯಲ್ಲಿ ನೋಂದಣಿ ಮಾಡಿಸಲು ನೋಟಿಸ್ ನೀಡಲಾಗಿದೆ. ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ 3 ಕ್ಲಿನಿಕ್ ಹಾಗೂ 1 ಲ್ಯಾಬೊರೇಟರಿಯನ್ನು ಮುಚ್ಚಲಾಗಿದೆ” ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ದಿಲೀಪ ಡೋಂಗ್ರೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕಚೇರಿ ಎದುರು ಕಾರಂಜಾ ಸಂತ್ರಸ್ತರಿಂದ ಸಾಂಕೇತಿಕ ಧರಣಿ

Advertisements

ಈ ವೇಳೆ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೋಂಗ್ರೆ, ಔರಾದ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಗಾಯತ್ರಿ, ಕೆ.ಪಿ.ಎಂ.ಇ ವಿಷಯ ನಿರ್ವಾಹಕ ಮಹೇಶ್ವರ್ ರೆಡ್ಡಿ, ಗ್ರೂಪ್-ಡಿ ನೌಕರ ಯಾಸೀನ್ ಖಾನ್, ಕಮಲನಗರ ಪಿ.ಎಸ್.ಐ, ಕಮಲನಗರ ಸಿ.ಪಿ.ಐ, ತಾ.ಪಂ.ಇ.ಒ. ಮಾಣಿಕರಾವ್ ಪಾಟೀಲ್ ಅವರು ಒಳಗೊಂಡ ತಂಡ ದಾಳಿ ನಡೆಸಿದೆ.

bec00d331e7bcef3df5237e7aa47b1c5?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X