ವಿಜಯಪುರ | ಏಳು ಮಂದಿ ಕಾರ್ಮಿಕರ ಸಾವು; ಗೋದಾಮು ಮಾಲೀಕರ ಬಂಧನಕ್ಕೆ ಆಗ್ರಹ

Date:

Advertisements

ವಿಜಯಪುರದ ರಾಜ್‌ಗುರು ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಕಾರಣನಾದ ಮಾಲೀಕರನ್ನು ಬಂಧಿಸಬೇಕು ಎಂದು ಹಲವಾರು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ದುರಂತ ಘಟನೆಯನ್ನು ಖಂಡಿಸಿರುವ ಎಐಡಿವೈಒ ಮುಖಂಡ ಸಿದ್ದಲಿಂಗ ಬಾಗೇವಾಡಿ, “ದೇಶದ ನಾನಾ ಭಾಗದ ಜನರು ಉದ್ಯೋಗಕ್ಕಾಗಿ ರಾಜ್ಯಕ್ಕೆ ವಲಸೆ ಬರುತ್ತಾರೆ. ಆ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಯಾವುದೇ ಕಾಯ್ದೆ ರೂಪಿಇಲ್ಲ. ಅವರೆಲ್ಲರ ಬದುಕು ಅತಂತ್ರವಾಗಿದೆ. ಈ ದುರ್ಘಟನೆಯ ವಿಚಾರದಲ್ಲಿ ಜಿಲ್ಲಾಡಳಿತ ಯಾವುದೇ ಪ್ರಭಾವಕ್ಕೆ ಒಳಗಾಗದೆ, ಗೋದಾಮು ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದಿದ್ದಾರೆ.

“ಗೋದಾಮು ಹಳೆಯದಾಗಿದ್ದು, ಸುಸ್ಥಿತಿಯಲ್ಲಿಲ್ಲ. ಅಂತಹ ಗೋದಾಮಿನಲ್ಲಿ ರೈತರ ಬೆಳೆಗಳನ್ನು ದಾಸ್ತಾನು ಮಾಡಲಾಗುತ್ತಿದೆ. ಇದು ಅಕ್ಷಮ್ಯ ಅಪರಾಧ. ಗೋದಾಮನ್ನು ಕಾರ್ಮಿಕ ಅಧಿಕಾರಿಗಳು ಪರಿಶೀಲನೆ ಮಾಡದಿರುವುದು ಖಂಡನೀಯ” ಎಂದು ಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಭೀರಪ್ಪ ಜುಮನಾಳ ಕಿಡಿಕಾರಿದ್ದಾರೆ.

Advertisements

ಬಡ ಕಾರ್ಮಿಕರನ್ನು ಹಗಲು ರಾತ್ರಿ ಎನ್ನದೆ ರಾಜ್‌ಗುರು ಎಂಬ ದಲ್ಲಾಳಿ ದುಡಿಸಿಕೊಂಡಿದ್ದಾರೆ. ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳನ್ನು ನೀಡದೇ ಇರುವುದು ಖಂಡನೀಯ. ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ ₹10 ಲಕ್ಷ ರೂ. ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X