ವಿಜಯಪುರ | ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವವರ ಮೇಲೆ ಕ್ರಮಕ್ಕೆ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು, ಅವರಿಗೆ ಮೂಲಭೂತ ಸೌಲಭ್ಯ ಒದಗಿಸದೇ ದುಡಿಸಿಕೊಳ್ಳಲಾಗುತ್ತಿದೆ. ಕಾನೂನು ಬಾಹಿರವಾಗಿ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವ ಮಾಲೀಕರ ಮೇಲೆ ಮತ್ತು ಕಾರ್ಮಿಕ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಪ್ರಭುಗೌಡ ಪಾಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕಟ್ಟಡ ಕಾರ್ಮಿಕರು ಸೇರಿದಂತೆ, ವಿವಿಧ ಕ್ಷೇತ್ರಗಳಲ್ಲಿ ಅಸಂಘಟಿತ ವಲಯದಲ್ಲಿ ಹೊರ ರಾಜ್ಯದವರು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಅಂತವರ ಜಾಡನ್ನು ಸರ್ಕಾರ ಗುರುತಿಸಬೇಕಾಗಿದೆ. ಹೊರ ರಾಜ್ಯದ ಕಾರ್ಮಿಕರ ನುಸುಳುವಿಕೆಯನ್ನು ತಡೆಗಟ್ಟುವಲ್ಲಿ ಕಾರ್ಮಿಕ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಇಂತಹ ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಬಾರಿ ತಂದರು ಮೌನವಹಿಸಿದ್ದಾರೆ. ಅವರು ಮೌನ ವಹಿಸಿದ್ದರ ಫಲವಾಗಿ ಇಂದು ಇಂತಹ ದುಷ್ಕೃತ್ಯಗಳು ನಡೆದಿವೆ” ಎಂದಿದ್ದಾರೆ.

ಈಗಾಗಲೇ ಹೊರ ರಾಜ್ಯದ ಕಾರ್ಮಿಕರನ್ನು ಮೆಕ್ಕೆಜೋಳ ಸಂಗ್ರಹಿಸಿಟ್ಟದ್ದ ಕಬ್ಬಿಣದ ಮೇಲ್ಪಟ್ಟ ಕುಸಿದು ಬಿದ್ದು ಕಳೆದ ರಾತ್ರಿಯಿಂದ ಜೀವನ್ಮರಣದಲ್ಲಿ ನರಳುತ್ತಿದ್ದ ಬಿಹಾರದ ಎಂಟು ಕಾರ್ಮಿಕರ ಪೈಕಿ, ಏಳು ಜನ ಕಾರ್ಮಿಕರು ದಾರುಣ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಗರದ ಹೊರ ಭಾಗದ ಕೈಗಾರಿಕಾ ಪ್ರದೇಶದ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದಿದೆ. ಅದರಂತೆ ಇನ್ನು ಅನೇಕ ಘಟನೆಗಳು ಕೈಗಾರಿಕೆಗಳಲ್ಲಿ ಘಟನೆಗಳು ಸಂಭವಿಸಿರಬಹುದು. ಅವುಗಳು ಬೆಳಕಿಗೆ ಬರದಂತೆ ಮಾಲೀಕರು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದರು.

Advertisements

ಕೂಡಲೇ ಇಂತಹ ಘಟನೆ ಮರುಕಳಿಸಬಾರದು ಎಂದರೆ ಕಾರ್ಮಿಕರ ಸುರಕ್ಷತಾ ಕ್ರಮದ ಜಾಗೃತಿ, ಕಾರ್ಮಿಕರ ಹಕ್ಕುಗಳ, ಕರ್ತವ್ಯ, ಸೌಲಭ್ಯಗಳ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು. ಪ್ರತಿ ತಿಂಗಳಿಗೊಮ್ಮೆ ಕಾರ್ಮಿಕ ಕುಂದು ಕೊರತೆ ಸಭೆ ನಡೆಸಬೇಕು. ಅದರಂತೆ ಕಾರ್ಮಿಕ ಅಧಿಕಾರಿಗಳ ಮೇಲೆ ಹಾಗೂ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕು. ಕಾರ್ಮಿಕರ ಕುಟುಂಬಕ್ಕೆ ಹೆಚ್ಚು ಪರಿಹಾರ ಧನ ನೀಡಬೇಕೆಂದು ಪಾಟೀಲ್‌ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X