ಇಬ್ಬರಿಂದ ರಾಜ್ಯ ಬಿಜೆಪಿಗೆ ಈ ಪರಿಸ್ಥಿತಿ ಬಂದಿದೆ, ದೆಹಲಿಗೆ ತೆರಳಿ ಮಾತನಾಡ್ತೀನಿ: ಬಸನಗೌಡ ಪಾಟೀಲ ಯತ್ನಾಳ್

Date:

Advertisements
  • ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಈ ಪರಿಸ್ಥಿತಿ ಬಂದಿದೆ
  • ವಿಪಕ್ಷ ಉಪನಾಯಕನಿಗೆ ಯಾವ ಅಧಿಕಾರ ಇದೆ: ಬಸನಗೌಡ ಪಾಟೀಲ ಯತ್ನಾಳ

ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿ ವರಿಷ್ಠರನ್ನು ಭೇಟಿಯಾಗಲು ಸಜ್ಜಾಗಿದ್ದಾರೆ.

ಸ್ವಪಕ್ಷಕ್ಕೆ ವಿಪಕ್ಷದವರಂತೆ ನಡೆದುಕೊಳ್ಳುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೆಸರು ಈ ಪಟ್ಟಿಯಲ್ಲಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಪ್ರತಿಕ್ರಿಯಿಸಿದ ಯತ್ನಾಳ್, “ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು” ಎಂದು ತಿಳಿಸಿದರು.

“ದೆಹಲಿಗೆ ನಾನಾಗಿಯೇ ಹೋಗಬೇಕು ಎಂದುಕೊಂಡಿಲ್ಲ. ಕರೆ ಬಂದ ಮೇಲೆ ಹೋಗುತ್ತೇನೆ. ಶಾಸಕ ರಮೇಶ್ ಜಾರಕಿಹೊಳಿ‌ ಸೇರಿದಂತೆ ಹಲವರಿಗೆ ಹೇಳಿರಬಹುದು. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ” ಎಂದು ವಾಗ್ದಾಳಿ ನಡೆಸಿದರು.

Advertisements

ವಿಪಕ್ಷ ಉಪನಾಯಕನಾಗಿ ಅರವಿಂದ ಬೆಲ್ಲದ ಆಯ್ಕೆ ವಿಚಾರದ ಬಗ್ಗೆ ಮಾತನಾಡಿ, “ವಿಧಾನಸಭೆ ವಿಪಕ್ಷ ಉಪನಾಯಕನಿಗೆ ಯಾವ ಅಧಿಕಾರ ಇದೆ? ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ” ಎಂದರು.

ಸಿದ್ಧಗಂಗಾ ಮಠದಲ್ಲಿ ಗುರುಭವನ ಉದ್ಘಾಟನಾ ಕಾರ್ಯಕ್ರಮ ಮುಗಿದ ಬಳಿಕ ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೆಲ ಅಸಮಾಧಾನಿತ ಶಾಸಕರು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ, ವಿ ಸೋಮಣ್ಣ, ಅರವಿಂದ ಬೆಲ್ಲದ ದೆಹಲಿಗೆ ತೆರಳಿ ಹೈಕಮಾಂಡ್​ ನಾಯಕರ ಜತೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X