ಮೈಸೂರು | ನಿರಾಶ್ರಿತರಿಗೆ ಹೊದಿಕೆ ವಿತರಣಾ ಅಭಿಯಾನಕ್ಕೆ ಚಾಲನೆ

Date:

Advertisements

ಮೈಸೂರು ನಗರದಲ್ಲಿ 45 ದಿನ ಕಾಲ ಪ್ರತಿನಿತ್ಯ ರಾತ್ರಿ 11 ಗಂಟೆಯಿಂದ 12ಗಂಟೆಯವರೆಗೆ ನಗರದ ವಿವಿಧ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿರುವ ಅಸಹಾಯಕರಿಗೆ ಹೂದಿಕೆ ವಿತರಣಾ ಅಭಿಯಾನವನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದೆ.

ಬೀದಿಬದಿಯಲ್ಲಿ ಜೀವನಸಾಗಿಸುವ, ರಾತ್ರಿಹೊತ್ತು ರಸ್ತೆಯಲ್ಲಿ ಮಲಗುವ ನಿರ್ಗತಿಕರು, ಬೀದಿಬದಿವ್ಯಾಪಾರಸ್ಥರು, ಮುಂಜಾನೆಯೇ ಸ್ವಚ್ಛತೆ ಮಾಡುವ ಪೌರಕಾರ್ಮಿಕರು ಹಾಗೂ ಬಡವರ್ಗದವರಿಗೆ ಚಳಿಗಾಲ ಹಾಗೂ ವಿಪರೀತ ತಂಡೀಗಾಳಿ ವಾತಾವರಣದ ಪರಿಣಾಮ ಆರೋಗ್ಯ ಸಮಸ್ಯೆ ಎದುರಿಸುತ್ತಾರೆ. ಇಂತವರಿಗೆ ಹೊದಿಕೆ ವಿತರಿಸಲು ಟ್ರಸ್ಟ್‌ ಮುಂದಾಗಿದೆ.

ಅಸಹಾಯಕರಿಗೆ ಹೂದಿಕೆ ವಿತರಣಾ ಅಭಿಯಾನವನ್ನು ಕೆ.ಆರ್. ಆಸ್ಪತ್ರೆ ಸುತ್ತಮುತ್ತ ಮಲಗಿರುವ ಸಾರ್ವಜನಿಕರಿಗೆ ಹೊದಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು. ನಂತರ ಅಭಿಯಾನವನ್ನು ಉದ್ದೇಶಿಸಿ ಶಾಂತವೇರಿ ಗೋಪಾಲ್ ಗೌಡ ಆಸ್ಪತ್ರೆಯ ವ್ಯವಸ್ಥಾಪಕರಾದ ಡಾ. ಶುಶ್ರುತ ಗೌಡ ಮಾತನಾಡಿದರು.

Advertisements

ನಮ್ಮ ಮೈಸೂರಲ್ಲಿ ನಿರಾಶ್ರಿತರು ಅಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಸಂಘಸಂಸ್ಥಗಳಿಗೆ ಅಥವಾ  ಸರ್ಕಾರಕ್ಕೆ ಅರ್ಜಿ ಹಾಕಲ್ಲ ಅಥವಾ ಸರ್ಕಾರದವರೇ ಎಲ್ಲವನ್ನು ಸರಿದಾರಿಗೆ ತರೋಕು ಆಗುವುದಿಲ್ಲ ಸಮಾಜವನ್ನ ಸರಿಪಡಿಸಲು ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳಮುಖ್ಯ,  ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ  ಮಾದರಿಯಲ್ಲೆ  ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದು ಹೇಳಿದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಸ್ನೇಹಿತರ ಸಹಕಾರದೊಂದಿಗೆ ಕಳೆದ ನಾಲ್ಕು ವರ್ಷದಿಂದ ನಿರಂತರವಾಗಿ ಡಿಸೆಂಬರ್ ಹಾಗೂ ಜನವರಿ ತಿಂಗಳಿನಲ್ಲಿ ಚಳಿಗಾಲ ಸಂದರ್ಭದಲ್ಲಿ ಸ್ನೇಹಿತರೊಡನೆ ಸ್ಥಳಕ್ಕೆ ತೆರಳಿ ಅವರ ಸ್ಥಿತಿಗಳನ್ನು ನೋಡಿ ಹೊದಿಕೆ ಯನ್ನು ವಿತರಿಸುತ್ತಾ ಬಂದಿದ್ದೇವೆ. ಜೊತೆಗೆ ಕೆಲವೊಂದು ಹಾಡಿಗಳಿಗೆ ಭೇಟಿ ಕೊಟ್ಟಿ ಹಾಡಿ ಜನಾಂಗದವರಿಗೂ ಹೂದಿಕೆಯನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಅಹಿಂದ ಮುಖಂಡ ನಜರ್ಬಾದ್ ನಟರಾಜ್, ಕಡಕೋಳ ಪಟ್ಟಣ ಪಂಚಾಯತ್ ಕಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ರುದ್ರಮೂರ್ತಿ, ಬೈರತಿ ಲಿಂಗರಾಜು, ಸೇರಿದಂತೆ ಇನ್ನಿತರ ಟ್ರಸ್ಟ್ ಸದಸ್ಯರುಗಳು ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X