ದಾವಣಗೆರೆ | ಪಾರದರ್ಶಕ ಮತ್ತು ನ್ಯಾಯಯುತ ವಹಿವಾಟಿಗೆ ಆಗ್ರಹಿಸಿ ಮನವಿ

Date:

Advertisements

ಭದ್ರಾ ನೀರಿನ ತಾಪತ್ರಯದ ನಡುವೆಯೂ ರೈತರು ಬಹಳ ಕಷ್ಟ ಪಟ್ಟು ಭತ್ತ ಬೆಳೆದಿದ್ದರೂ ಭತ್ತದ ಖರೀದಿದಾರರ ಬೆಲೆ ನಿಯಂತ್ರಣ, ಕುತಂತ್ರಗಳಿಂದ ರೈತರು ಸಾಕಷ್ಟು ರೋಸಿ ಹೋಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ರೈತ ಒಕ್ಕೂಟದ ಮುಖಂಡರು ಮನವಿ ಸಲ್ಲಿಸಿದ್ದಾರೆ.

ಎಪಿಎಂಸಿ ಆಡಳಿತಾಧಿಕಾರಿ ಆಗಿರುವ ಜಿಲ್ಲಾಧಿಕಾರಿಗಳು ವ್ಯಾಪಾರಸ್ಥರ, ಖರೀದಿದಾರರ, ದಲಾಲರ ಮತ್ತು ರೈತರ ಸಭೆ ಕರೆದು ಕೂಲಂಕಷವಾಗಿ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸೂಕ್ತ ಪಾರದರ್ಶಕ ಮತ್ತು ನ್ಯಾಯಯುತ ವ್ಯಾಪಾರ ವಹಿವಾಟು ನಡೆಯುವಂತೆ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

ಭತ್ತ ಖರೀದಿ ಮಾಡಿದ ಖರೀದಿದಾರರು ವೇಮೆಂಟ್, ಪೇಮೆಂಟ್ ಅಂತ ಕಂಡಿಷನ್ ಮಾಡಿರುವುದಲ್ಲದೇ, ವಾರಗಟ್ಟಲೆ ಹಣ ನೀಡದೆ ಸತಾಯಿಸುತ್ತಾರೆ. ಇದು ಅಕ್ಷಮ್ಯ ಅಪರಾಧ. ಖರೀದಿದಾರರ ಇಂತಹ ಕುತಂತ್ರ ಧೋರಣೆ ಸಂಪೂರ್ಣ ನಿಲ್ಲಬೇಕು. ವೇಮೆಂಟ್, ಪೇಮೆಂಟ್ ಪದ್ಧತಿ ಬದಲು ಲೋಡಿಂಗ್, ಪೇಮೆಂಟ್ ಅಥವಾ ಸ್ಪಾಟ್ ಪೇಮೆಂಟ್ ಪದ್ಧತಿ ಕಡ್ಡಾಯವಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

Advertisements

ಲೋಡಿಂಗ್, ಪೇಮೆಂಟ್ ಅಥವಾ ಸ್ಪಾಟ್ ಪೇಮೆಂಟ್ ಪದ್ಧತಿ ಅಂದರೆ ಖರೀದಿಸಿದ ಭತ್ತ ಲೋಡ್ ಮಾಡಿದ ತಕ್ಷಣ ಚೀಲ ಒಂದಕ್ಕೆ 2 ಸಾವಿರ ರೂಪಾಯಿಯಂತೆ ಎಷ್ಟು ಚೀಲ ತುಂಬಿಸಲಾಗಿರುತ್ತದೆಯೋ ಅಷ್ಟು ಚೀಲಗಳಿಗೆ ಲೆಕ್ಕ ಹಾಕಿ ಸ್ಥಳದಲ್ಲೇ ಹಣ ಕೊಡಬೇಕು. ನಂತರ ಲೋಡ್ ಲಾರಿಯನ್ನು ಮುಂದೆ ಹೋಗಲು ಬಿಡ ಬೇಕು. ಇನ್ನುಳಿದ ಹಣವನ್ನು ತೂಕ ವಾದ ನಂತರ ಲೆಕ್ಕ ಹಾಕಿ ಕೊಡಬೇಕು ಎಂದರು. ಖಾಲಿ ಚೀಲ ತೂಕಕ್ಕೆ 1ಕೆಜಿ ಶೂಟ್ ಜೊತೆಗೆ ಇನ್ನೊಂದು ಕೆಜಿ ಹೆಚ್ಚುವರಿಯಾಗಿ ಪಡೆಯುತ್ತಾರೆ. ಇದು ಸರಿಯಲ್ಲ. ಮೋಸ ಮಾಡಲಾಗುತ್ತಿದೆ. ಕಾರಣ ಚೀಲದ ಒಟ್ಟು ತೂಕದಲ್ಲಿ ಕಡಿತಗೊಳಿಸಿ ಲೆಕ್ಕ ಹಾಕಿ ಮೆಂಟ್ ಮಾಡಬೇಕು. ಹಮಾಲರ ಕೂಲಿ ಸಂಪೂರ್ಣ ಖರೀದಿದಾರರೆ ನೀಡಬೇಕು. ರೈತರ ಹಣದಲ್ಲಿ ಕಡಿತಗೊಳಿಸಬಾರದು ಎಂದು ಆಗ್ರಹಿಸಿದರು.

ಹಮಾಲರು ಶ್ಯಾಂಪಲ್ ಕಾಳು ಕೊಡಬೇಕು ಎಂದು ರೈತರನ್ನು ಒತ್ತಾಯಿಸಿ ಪೀಡಿಸಬಾರದು. ರೈತರು ಸಹ ಅವರ ಒತ್ತಾಯಕ್ಕೆ ಮಣಿದು ಒಂದು ಕಾಳನ್ನು ಸಹ ಕೊಡಬಾರದು. ಡಿಸೈಂಟ್ ಪದ್ಧತಿ ಕಡ್ಡಾಯವಾಗಿ ರದ್ದಾಗಬೇಕು. ಭತ್ತದ ಬೆಲೆ ಹೆಚ್ಚಾಗುತ್ತಿರುವುದರಿಂದ ರೈತರು ಖರೀದಿದಾರರ ಕುತಂತ್ರಗಳನ್ನು ಸಮರ್ಥವಾಗಿ ಎದುರಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರೈತ ಒಕ್ಕೂಟದ ಮುಖಂಡರಾದ ಕೊಳೇನಹಳ್ಳಿ ಬಿ.ಎಂ.ಸತೀಶ್, ಮಾಜಿ ಮೇಯ‌ರ್ ಎಚ್‌.ಎನ್‌. ಗುರುನಾಥ್, ವಾಸನ ಬಸವರಾಜ, ಅಣಬೇರು ಶಿವ ಪ್ರಕಾಶ್ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X