ನಮ್ಮ ಮೆಟ್ರೋ | ಮತ್ತೊಂದು ಸುರಂಗ ಕೊರೆದು ಹೊರ ಬಂದ ಟಿಬಿಎಂ ತುಂಗಾ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಾರ್ಯಾಚರಣೆ ಭರದಿಂದ ಸಾಗಿದೆ. ಈಗಾಗಲೇ ನಗರದಲ್ಲಿ ತನ್ನ ವಿಸ್ತರಣೆಯನ್ನು ಹೆಚ್ಚಿಸಿಕೊಂಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌) ತನ್ನ ಕಾರ್ಯವನ್ನು ಮುಂದುವರೆಸಿದೆ. ಇದೀಗ, ಸುರಂಗ ಕೊರೆಯುವ ಮೂಲಕ ಮೆಟ್ರೋ ಕಾಮಗಾರಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಸುರಂಗ ಕೊರೆಯುವ ಯಂತ್ರ (ಟಿಬಿಎಮ್‌) ತುಂಗಾ ತನ್ನ ಎರಡನೇ ಕಾರ್ಯಾಚರಣೆ ಮುಗಿಸಿ ಕಾಡುಗೊಂಡನಹಳ್ಳಿ ನಿಲ್ದಾಣದಿಂದ ಹೊರಬಂದಿದೆ.

ತುಂಗಾ ಟಿಬಿಎಂ ವೆಂಕಟೇಶಪುರ ನಿಲ್ದಾಣ ಮತ್ತು ಶಾಧಿ ಮಹಲ್ ಶಾಫ್ಟ್ ನಡುವೆ 1064 ಮೀ ಸುರಂಗದ ಕಾಮಗಾರಿ ಪೂರ್ಣಗೊಳಿಸಿದೆ. 2022 ಅಕ್ಟೋಬರ್ 31ರಂದು ವೆಂಕಟೇಶಪುರ ನಿಲ್ದಾಣದಿಂದ ಸುರಂಗ ಮಾರ್ಗದ ಕಾಮಗಾರಿ ಪ್ರಾರಂಭಿಸಿ, 2023 ಡಿಸೆಂಬರ್ 6ರಂದು ಅರೇಬಿಕ್ ಕಾಲೇಜು ಬಳಿಯ ಕಾಡುಗೊಂಡನಹಳ್ಳಿ (ಕೆ.ಜಿ ಹಳ್ಳಿ) ನಿಲ್ದಾಣದಲ್ಲಿ ಹೊರಬಂದಿದೆ. ಬರೋಬ್ಬರಿ 1184.4 ಮೀ ಕಾಮಗಾರಿ ಪೂರ್ಣಗೊಳಿಸಿದೆ.

Advertisements

ಈ ಪ್ರಗತಿಯೊಂದಿಗೆ, ಒಟ್ಟು 20992 ಮೀಟರ್‌ಗಳಲ್ಲಿ 18832.30 ಮೀ ಅಂದರೆ ಶೇ. 89.70% ರಷ್ಟು ಸುರಂಗ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಡಿ. 11ರಿಂದ ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್‌ ರೈಲಿನಲ್ಲಿ ಸಂಚರಿಸಿ

ಒಟ್ಟಾರೆ ರೀಚ್-6ರ ಸುರಂಗ ಮಾರ್ಗಕ್ಕಾಗಿ ನಿಯೋಜಿಸಲಾದ 9 ಟಿಬಿಎಂಗಳಲ್ಲಿ, 7 ಟಿಬಿಎಂಗಳು ಸುರಂಗ ಮಾರ್ಗದ ಕಾಮಗಾರಿಯನ್ನು ಪೂರ್ಣಗೊಳಿಸಿದೆ.

ಶೇ. 89.70ರಷ್ಟು ಸುರಂಗ ಕಾಮಗಾರಿ ಬುಧವಾರ ಪೂರ್ಣಗೊಂಡಿದೆ. ಕೆಜಿ ಹಳ್ಳಿ ನಿಲ್ದಾಣದಲ್ಲಿ ನೂರಾರು ಕಾರ್ಮಿಕರು ಜಮಾಯಿಸಿ ಟಿಬಿಎಂ ತುಂಗಾ ಎರಡನೇ ಸುರಂಗ ಕೊರೆಯುವ ಕಾರ್ಯ ಪೂರ್ಣಗೊಳಿಸುತ್ತಿದ್ದಂತೆ ಸಂಭ್ರಮಾಚರಣೆ ಮಾಡಿದರು.

ಸುರಂಗ ನಿರ್ಮಾಣಕ್ಕಾಗಿ ಜರ್ಮನ್ ನಿರ್ಮಿತ ಹೆರೆಂಕ್ನೆಕ್ಟ್ ಯಂತ್ರವನ್ನು ಮೊದಲ ಬಾರಿಗೆ ಜುಲೈ 23, 2021 ರಂದು ಬೆಂಗಳೂರಿನಲ್ಲಿ ನಿಯೋಜಿಸಲಾಯಿತು. ಪಿಂಕ್ ಲೈನ್ ಮಾರ್ಗದಲ್ಲಿನ ವೆಂಕಟೇಶಪುರ ಮತ್ತು ಟ್ಯಾನರಿ ರಸ್ತೆಯ ನಡುವಿನ 1,260 ಮೀಟರ್ ಸುರಂಗ ಕೊರೆಯಲು 13 ತಿಂಗಳು ಹಿಡಿಯಿತು.

ಪಿಂಕ್ ಲೈನ್ ಬೆಂಗಳೂರಿನ ಮೆಟ್ರೋದಲ್ಲಿ 13.92 ಕಿಮೀ ಮತ್ತು 6.98 ಕಿಮೀ ಎತ್ತರದ ವಿಭಾಗಗಳೊಂದಿಗೆ ಉದ್ದವಾದ ಸುರಂಗ ಮಾರ್ಗ ವಿಭಾಗಗಳಲ್ಲಿ ಒಂದಾಗಿದೆ. ಪಿಂಕ್ ಲೈನ್‌ನಲ್ಲಿ 18 ನಿಲ್ದಾಣಗಳಿದ್ದು, ಈ ಪೈಕಿ 12 ಭೂಗತ ಮತ್ತು ಆರು ಸಾಮಾನ್ಯ ನಿಲ್ದಾಣಗಳಾಗಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X