“ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಕೂಡ ಅವರಿಗೆ ಗುಂಡಿ ಮುಚ್ಚಲಾಗಲಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ‘ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ’ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ, “ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ?” ಎಂದು ಕೇಳಿದರು.
“ಉಚ್ಚ ನ್ಯಾಯಾಲಯ ಅವರಿಗೆ ಗುಂಡಿ ಮುಚ್ಚಿಲ್ಲ ಎಂದು ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ” ಎಂದರು.
‘ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ’ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ. ರಾಜಕೀಯವನ್ನೂ ಮಾಡಬೇಕಲ್ಲ” ಎಂದರು.
ಇದನ್ನು ಓದಿದ್ದೀರಾ? ಅಂಧ ಮುಸ್ಲಿಂ ವೃದ್ಧನ ಗಡ್ಡಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಕಿಡಿಗೇಡಿಗಳಿಬ್ಬರ ಬಂಧನ
“ಝಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ. ಬಹುತೇಕ ಜನ ವಾಪಸ್ ಬಂದಿದ್ದಾರೆ” ಎಂದರು.
‘ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ’ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು” ಎಂದರು.