ಅಮೆಜಾನ್‌ನಿಂದ 9 ಸಾವಿರ ಉದ್ಯೋಗ ಕಡಿತ : ಜನವರಿಯಲ್ಲಿ 18 ಸಾವಿರ ಮಂದಿ ವಜಾ ಮಾಡಿದ್ದ ಕಂಪನಿ

Date:

Advertisements
  • ಅಮೆಜಾನ್‌ನಿಂದ ಉದ್ಯೋಗ ಕಳೆದುಕೊಂಡವರ ಸಂಖ್ಯೆ 27 ಸಾವಿರಕ್ಕೆ ಏರಿಕೆ
  • 3 ಲಕ್ಷ ಕಾರ್ಪೊರೇಟ್ ಉದ್ಯೋಗಿಗಳಲ್ಲಿ ಶೇ. 9ರಷ್ಟು ಉದ್ಯೋಗಿಗಳ ವಜಾ

ಇ-ವಾಣಿಜ್ಯ ದೈತ್ಯ ಸಂಸ್ಥೆ ಅಮೆಜಾನ್‌ ತನ್ನ ಎರಡನೇ ಸುತ್ತಿನ ಉದ್ಯೋಗ ಕಡಿತದಲ್ಲಿ ಜಾಗತಿಕವಾಗಿ 9 ಸಾವಿರ ಮಂದಿಯನ್ನು ಮನೆಗೆ ಕಳಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಕಂಪನಿಯ ಸಿಇಒ ಆಂಡಿ ಜೆಸ್ಸಿ, ಪಿಎಕ್ಸ್‌ಟಿ, ಜಾಹಿರಾತು ಮತ್ತು ಟ್ವಿಟ್ಚ್ ವಿಭಾಗಗಳಲ್ಲಿ ಉದ್ಯೋಗ ಕಡಿತ ಮಾಡುವುದಾಗಿ ಹೇಳಿದ್ದಾರೆ.

ಕಳೆದ ಜನವರಿಯಲ್ಲಿ ಆರ್ಥಿಕ ವೆಚ್ಚ ಕಡಿತಗೊಳಿಸುವುದಕ್ಕಾಗಿ 18 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇನ್ನು ಎರಡನೇ ಸುತ್ತಿನಲ್ಲೂ ಹಣಕಾಸು ನಿರ್ವಹಣೆಯನ್ನು ಸರಿದೂಗಿಸುವುದಕ್ಕಾಗಿ ಉದ್ಯೋಗ ಕಡಿತಕ್ಕೆ ಮುಂದಾಗಿರುವುದಾಗಿ ಕಂಪನಿ ಸಿಇಒ ತಿಳಿಸಿದ್ದಾರೆ.

Advertisements

ಇದರೊಂದಿಗೆ ಈ ವರ್ಷ ಅಮೆಜಾನ್‌ನಿಂದ ಒಟ್ಟು 27 ಸಾವಿರ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಈ ಮೂಲಕ ಸರಿಸುಮಾರು 3 ಲಕ್ಷ ಕಾರ್ಪೊರೇಟ್ ಉದ್ಯೋಗಿಗಳಲ್ಲಿ ಶೇ. 9ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಮುಂದಿನ ವಾರದಲ್ಲಿ 9 ಸಾವಿರ ಮಂದಿಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ.

ಸದ್ಯ ಕಂಪನಿಯಲ್ಲಿ ವಾರ್ಷಿಕ ಯೋಜನೆ ನಡೆಯುತ್ತಿದ್ದು, ಸಂಸ್ಥೆಯು ತನ್ನ ಕೆಲ ವೆಚ್ಚ ಸರಿದೂಗಿಸುವುದಕ್ಕಾಗಿ ಉದ್ಯೋಗ ಕಡಿತದ ನಿರ್ಧಾರ ತೆಗೆದುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.              

ಅಮೆಜಾನ್ ದೊಡ್ಡ ಮಟ್ಟದಲ್ಲಿ ಉದ್ಯೋಗಿಗಳನ್ನು ವಜಾ ಮಾಡುತ್ತಿದೆಯಾದರೂ ಹೊಸ ನೇಮಕಾತಿಗಳನ್ನೂ ನಡೆಸಲಾಗುತ್ತಿದೆ.

ಉದ್ಯೋಗ ಕಡಿತದ ಬೆನ್ನಲ್ಲೇ ಅಮೆಜಾನ್ ಷೇರುಗಳು ಸೋಮವಾರ ಜಾಗತಿಕವಾಗಿ ಶೇ. 2ರಷ್ಟು ಕುಸಿತ ಕಂಡಿವೆ. ಮೈಕ್ರೋಸಾಫ್ಟ್ ಕಾರ್ಪ್ ಮತ್ತು ಆಲ್ಫಾಬೆಟ್ ಇಂಕ್ ಸೇರಿದಂತೆ ವಿಶ್ವದ ಜನಪ್ರಿಯ, ಬೃಹತ್‌ ಕಂಪನಿಗಳಲ್ಲೇ ಈ ರೀತಿಯ ಉದ್ಯೋಗ ಕಡಿತಗಳು ನಡೆಯುತ್ತಿರುವುದು ಭಾರೀ ಆತಂಕ ಮೂಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X