ಬೆಳಗಾವಿ | ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರ ಸಜೀವ ದಹನ

Date:

Advertisements

ಕುಂದಾನಗರಿ ಬೆಳಗಾವಿಯಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ವರ್ಷದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳಗಾಂವಕರ್ (24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಒಂದೇ ಕುಟುಂಬದ ನಾಲ್ವರು ರಾತ್ರಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ವಾಪಸಾಗುತ್ತಿದ್ದರು. ರಾತ್ರಿ 10:30ಕ್ಕೆ ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್​ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ.

Advertisements

ಕಾರಿನಲ್ಲಿದ್ದ ಇನ್ನಿಬ್ಬರು ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗಾಂವಕರ್ ಎನ್ನುವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಕ್ಕೆ ಎರಡೂ ವಾಹನಗಳು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತವಾಗುತ್ತಿದ್ದಂತೆಯೇ ಟಿಪ್ಪರ್​ ಚಾಲಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X