ಕಲಬುರಗಿ | ಪ್ರತಿ ಗ್ರಾಮ ಪಂಚಾಯತಿಗೊಂದು ತೊಗರಿ ಖರೀದಿ ಕೇಂದ್ರ ತೆರೆಯಲು ರೈತ ಸಂಘ ಒತ್ತಾಯ

Date:

Advertisements

ಚಿಂಚೋಳಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿಗೊಂದು ತೊಗರಿ ಖರೀದಿ ಕೇಂದ್ರ ತೆರೆದು, ಪ್ರತಿ ಕ್ವಿಂಟಾಲ್ ತೊಗರಿಗೆ ಕನಿಷ್ಠ 10 ಸಾವಿರ ರೂ. ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ.

ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಘಟಕದ ನೇತ್ರತ್ವದಲ್ಲಿ ಚಂಚೋಳಿ ತಾಲೂಕು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಚಿಂಚೊಳಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ತಾಲೂಕು, ಹಾಗಾಗಿ ವನ್ಯಜೀವಿ ಧಾಮ, ಜಲಪಾತ ಪ್ರವಾಸಿ ತಾಣವಾಗಿ ಮಾಡಬೇಕು. ಕರ್ನಾಟಕ ಹಾಗೂ ಆಂಧ್ರಪ್ರದೇಶ, ತೆಲಂಗಾಣ ಗಡಿಭಾಗ ಸಮೀಕ್ಷೆ ಮಾಡಬೇಕು. ಪ್ರತಿ ಕ್ವಿಂಟಾಲ್ ತೊಗರಿಗೆ ರಾಜ್ಯ ಸರ್ಕಾರದಿಂದ 1 ಸಾವಿರ ರೂ. ಪ್ರೋತ್ಸಾಹ ಧನ ಒದಗಿಸಿ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

Advertisements

“ಬೆಳೆ ವಿಮೆ ಹಣ ಕಟ್ಟಿದ್ದ ಎಲ್ಲಾ ರೈತರಿಗೆ ವಿಮೆ ಹಣ ಬಿಡುಗಡೆ, ರೈತರ ಸಾಲ ಮನ್ನಾ, ಬರ ಪರಿಹಾರ ಹಣ ಬಿಡುಗಡೆ ಮಾಡಬೇಕು. ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಕೈಗೊಂಡಿರುವ ಜಲ ಜೀವನ್ ಮಿಷನ್ ಕಾಮಗಾರಿ ಸಂಪೂರ್ಣ ಹದಗೆಟ್ಟು ಹೋಗಿದೆ. ಕಳಪೆ ಮಟ್ಟದ ಕಾಮಗಾರಿ ಮಾಡುತ್ತಿರುವ ಸಂಬಂಧಿಸಿದ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಸದರಿ ಕಾಮಗಾರಿ ಬಿಲ್ ತಡೆ ಹಿಡಿಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್‌ ಕಾರ್ಖಾನೆ ಇಂಜಿನಿಯರ್ ಆತ್ಮಹತ್ಯೆ

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಹಾಗೂ ಚಿಂಚೋಳಿ ತಾಲೂಕು ಘಟಕದ ಹಣಮಂತ ಪೂಜಾರಿ, ಜಾಫರ್ ಖಾನ್ ಸಾಬ್, ದಿಲೀಪ್ ನಾಗೂರೆ, ಶಂಕ್ರಯ್ಯಾ ಸ್ವಾಮಿ, ಸಿದ್ದಲಿಂಗಯ್ಯ ಸ್ವಾಮಿ ಸೇರಿದಂತೆ ಇತರರಿದ್ದರು.

ವರದಿ ಮಾಹಿತಿ : ಅವಿನಾಶ ರೆಡ್ಡಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X