ಭಾರತೀಯ ಮೂಲದ ಸಮೀರ್ ಶಾ ಬಿಬಿಸಿ ಅಧ್ಯಕ್ಷರಾಗಿ ನೇಮಕ

Date:

Advertisements

40 ವರ್ಷಗಳ ಕಾಲ ವಿಶ್ವ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆ ಬಿಬಿಸಿಯಲ್ಲಿ ಕೆಲಸ ಮಾಡಿದ ಭಾರತ ಮೂಲದ ಡಾ ಸಮೀರ್ ಶಾ ಅವರು ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.

ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ನೇಮಕಾತಿ ಪೂರ್ವ ಪರಿಶೀಲನೆಗಾಗಿ ಹೌಸ್ ಆಫ್ ಕಾಮನ್ಸ್ ಮೀಡಿಯಾ ಕಲ್ಚರ್, ಮೀಡಿಯಾ ಮತ್ತು ಸ್ಪೋರ್ಟ್ಸ್ ಸೆಲೆಕ್ಟ್ ಕಮಿಟಿಯ ಕ್ರಾಸ್-ಪಾರ್ಟಿ ಸಂಸದರು ಸಮೀರ್ ಶಾ ಅವರನ್ನು ಸಂದರ್ಶಿಸಿ ಸಮ್ಮತಿ ಸೂಚಿಸಿದ್ದಾರೆ.

“ಟಿವಿ ನಿರ್ಮಾಣ ಮತ್ತು ಪತ್ರಿಕೋದ್ಯಮದಲ್ಲಿ 40 ವರ್ಷಗಳಿಗೂ ಹೆಚ್ಚು ವೃತ್ತಿಜೀವನವನ್ನು ಹೊಂದಿರುವ ಡಾ. ಸಮೀರ್‌ ಶಾ ಅವರು ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಏರಲು ಅಪಾರ ಅನುಭವದ ಸಂಪತ್ತು ಹೊಂದಿದ್ದಾರೆ” ಎಂದು ಇಂಗ್ಲೆಂಡಿನ ಸಂಸ್ಕೃತಿ ಕಾರ್ಯದರ್ಶಿ ಲೂಸಿ ಫ್ರೇಜರ್ ತಿಳಿಸಿದ್ದು, ನೇಮಕಾತಿ ಪ್ರಕ್ರಿಯೆಯ ಪ್ರಕಾರ ಆಯ್ಕೆಯನ್ನು ದೃಢಪಡಿಸಿದ್ದಾರೆ.

Advertisements

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ 1952ರಲ್ಲಿ ಜನಿಸಿದ ಸಮೀರ್‌ ಷಾ ಅವರು 1970 ರ ದಶಕದಲ್ಲಿ ವಿದ್ಯಾಭ್ಯಾಸದ ಕಾರಣದಿಂದಾಗಿ ಇಂಗ್ಲೆಂಡ್‌ಗೆ ಆಗಮಿಸಿ ಬಿಬಿಸಿಯಿಂದ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಮುಖ್ಯಮಂತ್ರಿಯಾಗಿ ಎ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

“ವೇಗವಾಗಿ ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ಬಿಬಿಸಿ ಯಶಸ್ವಿಯಾಗುವುದನ್ನು ನೋಡುವ ಸ್ಪಷ್ಟ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದಾರೆ. ಭವಿಷ್ಯದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ಬಿಬಿಸಿಗೆ ಅಗತ್ಯವಿರುವ ಬೆಂಬಲ ಮತ್ತು ಪರಿಶೀಲನೆಯನ್ನು ಅವರು ಒದಗಿಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಲೂಸಿ ಫ್ರೇಜರ್ ಹೇಳಿದರು.

71 ವರ್ಷದ ಸಮೀರ್‌ ಶಾ ಅವರು ಬಿಬಿಸಿಯಲ್ಲಿ ಸಲ್ಲಿಸಿರುವ ಅತ್ಯಮೂಲ್ಯ ಸೇವೆಗಳಿಗಾಗಿ 2019 ರಲ್ಲಿ 2ನೇ ರಾಣಿ ಎಲಿಜಬೆತ್ ಅವರಿಂದ ಗೌರವಿಸಲ್ಪಟ್ಟಿದ್ದರು.

ಬಿಬಿಸಿ ನೂತನ ಅಧ್ಯಕ್ಷರಾಗಿರುವ ಸಮೀರ್‌ ಶಾ ಅವರು ವಾರ್ಷಿಕ 1.60 ಲಕ್ಷ ಪೌಂಡ್(1.67 ಕೋಟಿ ರೂ.) ವೇತನ ಪಡೆಯಲಿದ್ದಾರೆ. ವಾರಕ್ಕೆ ಮೂರು ದಿನ ಮಾತ್ರ ಕೆಲಸ ನಿರ್ವಹಿಸಲಿದ್ದಾರೆ. ಈ ಮೊದಲು ಶಾ ಅವರು ಬಿಬಿಸಿಯಲ್ಲಿ 2007 ಮತ್ತು 2010 ರ ನಡುವೆ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X