ರಾಯಚೂರು | ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

Date:

Advertisements

ರಾಯಚೂರು ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್ ಕೆಡವಿ ಸರ್ಕಾರಿ ಕೋಟೆ ಕಂದಕದ ಸ್ಥಳವನ್ನು ಅತಿಕ್ರಮಿಸಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಾಚ್ಯವಸ್ತು ಇಲಾಖೆಯ ಕ್ಯೂರೇಟರ್ ಸರ್ಕಾರ ವಸ್ತು ಸಂಗ್ರಹಾಲಯ, ರಾಯಚೂರು ನಗರಸಭೆ ಪೌರಾಯಕ್ತರಿಗೆ ಪತ್ರ ಬರೆದಿದೆ.

ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್‌ ತೆರವುಗೊಳಿಸಿ ಅದೇ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಹಿಂಬದಿಯಲ್ಲಿರುವ ಐತಿಹಾಸಿಕ ಕೋಟೆ ಕಂದಕದ ಸ್ಥಳವನ್ನು ಒತ್ತುವರಿ ಮಾಡಿಕೊಂಡು ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡುಬಂದಿದೆ.

ಯಾವುದೇ ಸೆಟ್‌ಬ್ಯಾಕ್ ಬಿಡದೆ ನಕ್ಷೆಯ ವಿರುದ್ಧವಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಬಹುಮಹಡಿ ಕಟ್ಟಡ ನಿರ್ಮಾಣ ತಡೆದು ಅತಿಕ್ರಮಿಸಿದ ಸ್ಥಳವನ್ನು ಪರಿಶೀಲನೆ ಮಾಡಿ ತೆರವುಗೊಳಿಸಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ದೂರು ನೀಡಿದ್ದಾರೆ.

Advertisements

ರಾಜ್ಯ ಸಂರಕ್ಷಿತ ನಗರದ ಕೋಟೆ ಬಾಗಿಲು ನವರಂಗ ದರ್ವಾಜಾ ಸ್ಮಾರಕದಿಂದ ನೈರುತ್ಯಕ್ಕೆ 209.49 ಮೀಟರ್ ಅಂತರದಲ್ಲಿದ್ದು, ಸ್ಮಾರಕದ ನಿಯಂತ್ರಣ ಪ್ರದೇಶದಲ್ಲಿ ಬರುತ್ತದೆ. ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಹಾಗೂ ಪುರಾತತ್ವ ಸ್ಥಳಗಳ ಅವಶೇಷ ಕಾಯ್ದೆ 1961 ಮತ್ತು ನಿಯಮ 1965ರ ಪ್ರಕಾರ ಸಂರಕ್ಷಿತ ಸ್ಮಾರಕ ಪ್ರದೇಶದ ಯಾವುದೇ ದಿಕ್ಕಿನಿಂದ 100 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಯಾವುದೇ ಕಟ್ಟಡ ನಿರ್ಮಾಣ, ಗಣಿಗಾರಿಕೆ ಇತರೆ ಚಟುವಟಿಕೆಗಳನ್ನು ನಡೆಸಲು ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮೂಲಭೂತ ಸೌಲಭ್ಯ ವಂಚಿತ ಸರ್ಕಾರಿ ಪ್ರೌಢಶಾಲೆ, ಪರಿಹಾರಕ್ಕೆ ಮಕ್ಕಳ ಆಗ್ರಹ

“ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕ ಯೋಜನೆ ಕಾಮಗಾರಿಯನ್ನು ಒಳಗೊಂಡಂತೆ ಯಾವುದೇ ಕಾಮಗಾರಿ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದಿಲ್ಲ. 200 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಮುನ್ನ ಆಯುಕ್ತರ ಪೂರ್ವಾನುಮತಿ ಪಡೆಯಬೇಕು. ಕೂಡಲೇ ಪರಿಶೀಲನೆ ಮಾಡಿ ಕ್ರಮ ವಹಿಸಬೇಕು” ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X