ಮೈಸೂರು: ದೇವಸ್ಥಾನದಲ್ಲಿ ಡೋಲು ಬಾರಿಸಲು ನಿರಾಕರಿಸಿದ ದಲಿತ ವ್ಯಕ್ತಿಯ ಮೇಲೆ ಹಲ್ಲೆ

Date:

Advertisements

ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಡೋಲು ಬಾರಿಸಲು ನಿರಾಕರಿಸಿದ 65 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್‌ ಎಂ ಶ್ರೀಧರ್‌ ಅವರ ಪ್ರಕಾರ ”ದಲಿತ ಸಮುದಾಯದ ಪರಮಯ್ಯ ಎಂಬುವವರು ಅನಾರೋಗ್ಯದ ಕಾರಣ ಮಾಕೋಡು ಗ್ರಾಮದ ಬಸವೇಶ್ವರ ದೇವಸ್ಥಾನದ ವಾರ್ಷಿಕ ಪೂಜೆಯಲ್ಲಿ ಡೋಲು ಬಾರಿಸಲು ನಿರಾಕರಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸವರ್ಣೀಯ ಸಮುದಾಯದ ಕುಮಾರ್‌ ಎಂಬಾತ ಜಾತಿ ಹೆಸರಿನಲ್ಲಿ ಕೆಟ್ಟದಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ” ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನವಿದ್ದು, ದಶಕಗಳಿಂದ ಎಲ್ಲ ಸಮುದಾಯದವರು ಒಟ್ಟಾಗಿ ವಾರ್ಷಿಕ ಪೂಜೆಯನ್ನು ಆಚರಿಸುತ್ತಿದ್ದಾರೆ. ದಲಿತ ಸಮುದಾಯದವರು ಡೋಲು ಬಾರಿಸುತ್ತಾರೆ. ಪರಮಯ್ಯ ಡೋಲು ಬಾರಿಸಲು ನಿರಾಕರಿಸಿದಾಗ ಕುಮಾರ್ ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

“ನನ್ನ ತಂದೆ ಅಸ್ವಸ್ಥರಾಗಿದ್ದರು. ಅದಕ್ಕಾಗಿಯೇ ಅವರು ಡೋಲು ಬಾರಿಸಲು ನಿರಾಕರಿಸಿದರು. ದೇವಸ್ಥಾನದ ಸಮಿತಿಯವರಿಗೆ ನಾನು ಜವಾಬ್ದಾರಿ ವಹಿಸುತ್ತೇನೆ ಎಂದು ತಿಳಿಸಿದರೂ ಆರೋಪಿಗಳು ನನ್ನ ತಂದೆಗೆ ಡೋಲು ಬಾರಿಸುವಂತೆ ಒತ್ತಾಯಿಸಿದ್ದಾರೆ. ತಂದೆ ನಿರಾಕರಿಸಿದಾಗ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ’’ ಎಂದು ಪರಮಯ್ಯ ಅವರ ಪುತ್ರ ಬಸವರಾಜು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತೀಯ ಮೂಲದ ಸಮೀರ್ ಶಾ ಬಿಬಿಸಿ ಅಧ್ಯಕ್ಷರಾಗಿ ನೇಮಕ

ಮಾಕೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಶೈಲಜಾ ಮಾತನಾಡಿ, ”ಗ್ರಾಮದ ಆರಾಧ್ಯ ದೈವ ಎನಿಸಿರುವ ಬಸವೇಶ್ವರ ದೇವಸ್ಥಾನದ ಪೂಜೆಯಲ್ಲಿ ಮುಸ್ಲಿಮರು ಸೇರಿದಂತೆ ಎಲ್ಲ ಸಮುದಾಯದವರು ದಶಕಗಳಿಂದ ಪಾಲ್ಗೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ಈ ಘಟನೆಯಿಂದ ಗ್ರಾಮದ ಐಕ್ಯತೆಗೆ ಧಕ್ಕೆ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ ಅವರು, ದೇವಸ್ಥಾನ ಸಮಿತಿ ಹಾಗೂ ಇತರರ ನಡುವಿನ ಬಿಕ್ಕಟ್ಟು ನಿವಾರಣೆಗೆ ಮುಂದಿನ ವಾರದಲ್ಲಿ ಎಲ್ಲ ಸಮುದಾಯಗಳ ಜತೆ ಸಭೆ ನಡೆಸಲಾಗುವುದು ಎಂದರು.

“ಆರೋಪಿ ಕುಮಾರ್ ದೇವಸ್ಥಾನ ಸಮಿತಿಯ ನಿರ್ದೇಶಕನಾಗಿದ್ದು, ನಾವು ಕುಮಾರ್ ವಿರುದ್ಧ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ, ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಪಿರಿಯಾಪಟ್ಟಣ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಪರಮಯ್ಯ ಡಿಸ್ಚಾರ್ಜ್ ಆಗಿದ್ದಾರೆ” ಎಂದು ಇನ್‌ಸ್ಪೆಕ್ಟರ್ ಶ್ರೀಧರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X