ಹೊಸ ವಿವಿಗಳಿಗೆ ಮೂಲಭೂತ ಸೌಕರ್ಯ ನೀಡುವ ಬಗ್ಗೆ ಸಿಎಂ ಜತೆ ಚರ್ಚೆ: ಸಚಿವ ಎಂ.ಸಿ ಸುಧಾಕರ್

Date:

Advertisements

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ, ಹಾಸನ, ಬೀದರ್, ಕೊಪ್ಪಳ, ಹಾವೇರಿ, ಕೊಡಗು ಮತ್ತು ಬಾಗಲಕೋಟೆ ವಿವಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಉನ್ನತ ಶಿಕ್ಷಣ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರ, ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡುವ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೋಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ಥಾಪಿತವಾಗಿರುವ ವಿಶ್ವವಿದ್ಯಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿ ಮಾತನಾಡಿದರು.

“2022-23ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೆ ಕಾರ್ಯ ನಿರ್ವಹಿಸಲಿರುವ ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸುವ ಪ್ರಸ್ತಾಪಿತ ನೂತನ ವಿವಿಗಳಿಗೆ ಹಂಚಿಕೆಯಾದ ವಾರ್ಷಿಕ 2 ಕೋಟಿ ರೂ ಆವರ್ತಕ ವೆಚ್ಚದಲ್ಲಿ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ನೂತನವಾಗಿ ಸೃಜಿಸಲಾದ ನೂತನ ವಿವಿಗಳಿಗೆ ವೇತನ ಪಾವತಿಗಾಗಿ ತಲಾ ರೂ 1 ಕೋಟಿ ರೂ.ಗಳಂತೆ 7 ಕೋಟಿ ರೂ.ಗಳನ್ನು ಪುನರ್ವಿನಿಯೋಗದ ಮೂಲಕ ಬಿಡುಗಡೆಗೊಳಿಸಿ ಆದೇಶಿಸಿದೆ” ಎಂದು ತಿಳಿಸಿದರು.

Advertisements

“ಪ್ರಸ್ತಾಪಿತ ನೂತನ ವಿವಿಗಳಿಗೆ ಮಾತೃ ವಿವಿಗಳಿಂದ ವರ್ಗಾವಣೆ ಮಾಡಿರುವ ಬೋಧಕ-ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 58 ರನ್ವಯ ಕ್ರಮ ವಹಿಸುವ ಕುರಿತು ಅವಕಾಶವನ್ನು ಕಲ್ಪಿಸಲಾಗಿದ್ದು, ಅದರನ್ವಯ ಸರ್ಕಾರದ ಹಂತದಲ್ಲಿ ನೂತನ ವಿವಿಗಳಿಗೆ ಪ್ರಸ್ತಾಪಿತ ಬೋಧಕ-ಬೋಧಕೇತರ ಸೇವಾ ಭದ್ರತೆಗೆ ಸಂಬಂಧಿಸಿದಂತೆ ನಿರ್ದೇಶನ ನೀಡಲು ಕ್ರಮ ವಹಿಸಲಾಗಿದೆ” ಎಂದು ಸಚಿವ ಎ ಸಿ ಸುಧಾಕರ್ ತಿಳಿಸಿದರು.

ಈ ಹೊಸ ವಿವಿಗಳ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸ್ಪಷ್ಟ ನಿಲುವು ಪ್ರಕಟಿಸಲಾಗುವುದು. ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡುವ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಮೂಲಕ ವಾರ್ಷಿಕ ನೋಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ಮಾದರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ ಅಲ್ಲಿನ ಸಮುದಾಯಕ್ಕೆ ಸವಕಾಶವನ್ನು ಸ್ಥಳೀಯವಾಗಿ ಕಲ್ಪಿಸಿ, ಯುವ ಜನಾಂಗವನ್ನು ದೇಶದ ಫಲಪ್ರದವಾಗಿ ಬೆಳೆಸಲು ಸಹಯೋಗ ನೀಡುವ ನಿಟ್ಟಿನಲ್ಲಿ ಈ ಹೊಸ ವಿವಿಗಳನ್ನು ಸ್ಥಾಪಿಸಲಾಗಿದೆ.

“ಸ್ಥಾಪಿತವಾಗಿರುವ ವಿವಿಗಳಲ್ಲಿ ಸಂಯೋಜಿತ ಕಾಲೇಜುಗಳ ಸಂಖ್ಯೆಯು ಹಳೆಯ ವಿವಿಗಳ ರೀತಿಯಲ್ಲಿ ಇಲ್ಲದೇ ಇರುವುದು, ಸ್ವಂತ ಕಟ್ಟಡ ಇಲ್ಲದೇ ಇರುವುದು ಹಾಗೂ ಖಾಯಂ ಸ್ವರೂಪದ ಬೋಧಕ-ಬೋಧಕೇತರ ಸಿಬ್ಬಂದಿ, ಆರ್ಥಿಕ ಮುಗ್ಗಟ್ಟು ಮತ್ತು ಸರ್ಕಾರದ ಅನುದಾನ ಇಲ್ಲದೇ ಇರುವುದು ಮುಂತಾದ ಹಲವಾರು ಸಮಸ್ಯೆಗಳಿಂದ ನೂತನ ವಿವಿಗಳು ಸೊರಗಿವೆ, ಹಲವು ವಿವಿಗಳು ಸ್ನಾತಕೋತ್ತರ ಕೇಂದ್ರಗಳ ಸ್ವರೂಪದಲ್ಲೇ ಕಾರ್ಯನಿರ್ವಹಿಸುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕ ಜನರ ಬೇಡಿಕೆ ಮತ್ತು ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಪ್ರಾದೇಶಿಕ ಅಸಮತೋಲನವನ್ನು ನಿರ್ಮೂಲನೆ ಮಾಡುವ ಮತ್ತು ಜಿಲ್ಲೆಗಳ ಉನ್ನತ ಶಿಕ್ಷಣದ ವಾರ್ಷಿಕ ನೋಂದಣಿ ಅನುಪಾತವನ್ನು ಸುಧಾರಿಸುವ ನಿಟ್ಟಿನಲ್ಲಿ ತೆರೆದಿರುವ ಜಿಲ್ಲಾಮಟ್ಟದಲ್ಲಿರುವ ವಿವಿಗಳು ಇನ್ನೂ ಟೇಕಾಫ್ ಆಗಿಲ್ಲ” ಎಂಬ ವಿಷಯದ ಕುರಿತಂತೆ ಸದಸ್ಯರಾದ ಗೋವಿಂದರಾಜು ಮತ್ತು ಕೆ.ಎ.ತಿಪ್ಪೇಸ್ವಾಮಿ ಹಾಗೂ ಸೂರಜ್ ರೇವಣ್ಣ ಅವರಿಗೆ ಪೂರಕವಾಗಿ ಸದಸ್ಯರಾದ ತಳವಾರ ಸಾಬಣ್ಣ, ರವಿಕುಮಾರ್, ಹನುಮಂತ ನಿರಾಣಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X