ಬೆಂಗಳೂರು | ಮೈ ತುಂಬಾ ಕೆಜಿಗಟ್ಟಲೇ ಬಂಗಾರ ಹಾಕಿಕೊಂಡು ಹವಾ ಸೃಷ್ಟಿಸುತ್ತಿದ್ದ ಕಿಂಗ್ ಮೇಕರ್ ದಾಸ ಬಂಧನ

Date:

Advertisements

ಮೈ ತುಂಬಾ ಕೆಜಿಗಟ್ಟಲೇ ಬಂಗಾರದ ಒಡವೆ ಹಾಕಿಕೊಂಡು ಹಿಂದೆ ಮುಂದೆ ನಾಲ್ಕು ಹುಡುಗರನ್ನು ಇಟ್ಟುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಕಿಂಗ್‌ ಮೇಕರ್ ದಾಸ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಬೇರೊಬ್ಬರ ಆಸ್ತಿ ವಿಚಾರದಲ್ಲಿ ಮೂಗು ತೂರಿಸಿದ ಈತನನ್ನು ಯಲಹಂಕ ಪೊಲೀಸರು ಬಂಧಿಸಿದ್ದು, ಇದೀಗ ಕಂಬಿ ಎಣಿಸುತ್ತಿದ್ದಾನೆ.

ಹೌದು, ಮೈ ತುಂಬಾ ಬಂಗಾರದ ಒಡವೆ ಹಾಕಿಕೊಂಡು, ಹಿಂದೆ ಮುಂದೆ ನಾಲ್ಕು ಹುಡುಗರನ್ನು ಇಟ್ಟುಕೊಂಡು ಓಡಾಡುವ ದಾಸ್ ಕಿಂಗ್ ಮೇಕರ್ ಎಂಬ ಹೆಸರಿನ ಈತ ನೆಗೆಟಿವ್ ಶೇಡ್‌ನಲ್ಲಿ ಜನಪ್ರಿಯತೆ ಗಳಿಸಲು ಮುಂದಾಗಿದ್ದಾನೆ.

Advertisements

 

View this post on Instagram

 

A post shared by Dasa Kingmaker (@dasakingmaker)

ಮಹಿಳೆ ಮತ್ತು ಓರ್ವ ವ್ಯಕ್ತಿಯ ನಡುವೆ ಆಸ್ತಿಯ ವಿಚಾರದಲ್ಲಿ ಗಲಾಟೆ ನಡೆದಿದೆ. ಆ ವ್ಯಕ್ತಿ ದಾಸ್‌ನ ಬಳಿ ಬಂದು ಸಮಸ್ಯೆಯ ಬಗೆಹರಿಸಿಕೊಡುವಂತೆ ಕೇಳಿದ್ದಾನೆ. ಇದಕ್ಕೆ ದಾಸ ತನ್ನ ಸಹಚರರನ್ನು ಮಹಿಳೆಯ ಮನೆಗೆ ಕಳುಹಿಸಿ ಬೆದರಿಕೆ ಹಾಕಿಸಿದ್ದಾನೆ. ಅಲ್ಲದೇ, ಮಹಿಳೆಯ ಮೇಲೆ ಹಲ್ಲೆಯೂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ

ಹಲ್ಲೆಗೊಳಗಾದ ಮಹಿಳೆ ದಾಸನ ಸಹಚರರು ಬಂದು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಯಲಹಂಕ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ದೂರು ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ಪೊಲೀಸರು ದಾಸನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X