ಪ್ಯಾರಿಸ್ ಒಲಿಂಪಿಕ್ಸ್: ಅಮೃತ ಕ್ರೀಡಾ ದತ್ತು ಯೋಜನೆಯಡಿ ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ: ಸಚಿವ ಬಿ.ನಾಗೇಂದ್ರ

Date:

Advertisements

ಮುಂದಿನ ವರ್ಷ ಫ್ರಾನ್ಸ್ ದೇಶದ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾಗುವ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಎಸ್.ರುದ್ರೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ 566 (562)ಕ್ಕೆ ಉತ್ತರಿಸಿದರು.

ಪ್ಯಾರಿಸ್‌ನಲ್ಲಿ ನಡೆಯುವ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22 ನೇ ಸಾಲಿನಿಂದ ಅಮೃತ ಕ್ರೀಡಾ ದತ್ತು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಒಲಿಂಪಿಕ್ಸ್‌ ಸೇರಿದಂತೆ ಅಂತಾರಾಷ್ಟಿಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಪೋಷಿಸಿ, ಸಾಧನೆಗೆ ಅಗತ್ಯವಾದ ಬೆಂಬಲ ವ್ಯವಸ್ಥೆ ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದರು.

Advertisements

“ಈ ಯೋಜನೆಯ ಫಲಾನುಭವಿಗಳಿಗೆ ತರಬೇತಿಗಾಗಿ ಕ್ರೀಡಾ ವಿಜ್ಞಾನದ ಬೆಂಬಲ, ಪೌಷ್ಟಿಕ ಆಹಾರ, ತರಬೇತಿಗೆ ಅಗತ್ಯವಿರುವ ಕ್ರೀಡಾ ಕಿಟ್ ಖರೀದಿ, ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು, ದೈನಂದಿನ ಅಗತ್ಯಗಾಗಿ ಮತ್ತು ಇತರೆ ವೆಚ್ಚಗಳಿಗಾಗಿ ತಲಾ ರೂ 10 ಲಕ್ಷ ವಾರ್ಷಿಕ ಗರಿಷ್ಠ ಪ್ರೋತ್ಸಾಹ ಧನ ನೀಡಲಾಗುತ್ತಿದೆ” ಎಂದು ಸಚಿವ ಬಿ.ನಾಗೇಂದ್ರ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X