ವಿಜಯಪುರ | ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

Date:

Advertisements

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪನದ ಅನುಭವವಾಗಿತ್ತು. ಆದರೆ, ಕಳೆದ ಕೆಲ ತಿಂಗಳಿಂದ ಭೂಕಂಪನ ಆಗಿರಲಿಲ್ಲ. ಆದರೆ, ಇದೀಗ ಮತ್ತೆ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದ್ದು ಜನರ ನಿದ್ದಗೇಡಿಸಿದೆ.

ಜಿಲ್ಲೆಯ ಉಕುಮನಾಳ ಗ್ರಾಮದಲ್ಲಿ ಡಿ.8ರಂದು ಬೆಳಗ್ಗೆ 6.52ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ.  ರಿಕ್ಟರ್ ಮಾಪಕದಲ್ಲಿ 3.1 ರಷ್ಟು ತೀವ್ರತೆ ದಾಖಲಾಗಿದೆ ಎಂದು ಕೆಎಸ್ಎನ್‌ಡಿಎಂಸಿ ಅಧಿಕಾರಿಗಳು ದೃಢೀಕರಿಸಿದ್ದಾರೆ.

ಇನ್ನು ಕಳೆದೆರಡು ವರ್ಷಗಳಿಂದ ಜಿಲ್ಲೆಯಲ್ಲಿ ಭೂಕಂಪವಾಗುತ್ತಲೆ ಇದ್ದು ಜನರು ಆತಂಕದಲ್ಲಿ ಜೀವನ ಕಳೆಯುವಂತಾಗಿದೆ. ಜಿಲ್ಲೆಯಲ್ಲಿ ಭೂಕಂಪನದ ಸದ್ದು ಆಗಾಗ ಆಗುತ್ತಿದ್ದು ಇದರಿಂದ ಜನರಲ್ಲಿ ಆತಂಕ ಎದುರಾಗಿದೆ. ರಾತ್ರಿ, ಮಧ್ಯರಾತ್ರಿ ಸಮಯದಲ್ಲಿ ಏಕಾಏಕಿ ಶಬ್ದದೊಂದಿಗೆ ಭೂಮಿ ನಡುಗುತ್ತಿರುವುದು ಜನತೆ ನಿದ್ದೆಗೆಡುವಂತೆ ಮಾಡಿದೆ.

Advertisements

ವಿಜಯಪುರ ಭಾಗದಲ್ಲಿ 2010ರಲ್ಲಿ 24 ಬಾರಿ ಭೂಮಿ ಕಂಪಿಸಿತ್ತು. ನಂತರ 2011ರಲ್ಲಿ ಒಂದು ಬಾರಿ ಕಂಪಿಸಿತ್ತು. ಇದಾದನಂತರ 2011ರಿಂದ 2021ರವರೆಗೆ ಭೂಕಂಪನದ ಸದ್ದೇ ಇರಲಿಲ್ಲ. 2021ರಿಂದ ಮತ್ತೆ ಭೂಕಂಪನ ಸಂಭವಿಸುತ್ತಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.

2010ರಲ್ಲಿ ತಳೆವಾಡ, ಕಲಗುರ್ಕಿ, ಮಲಘಾಣ, ಹುಣಶ್ಯಾಳ ಭಾಗದಲ್ಲಿ ಪದೆ ಪದೇ ಭೂಕಂಪನಗಳು ಸಂಭವಿಸಿದ ಕಾರಣ ಅಲ್ಲಿ ಭೂಕಂಪ ನಿರೀಕ್ಷಣಾ ಯಂತ್ರಗಳನ್ನು ಅಳವಡಿಸಲಾಗಿತ್ತು. ಅಲ್ಲಿ ದಾಖಲಾದ ಭೂಕಂಪನಗಳನ್ನು ಅವಲೋಕಿಸಿದಾಗ ಸಾಮಾನ್ಯವಾಗಿ 1.2 ಕಡಿಮೆ ತೀವ್ರತೆಯ ಭೂಕಂಪ ದಾಖಲಾಗಿದ್ದರೆ, ಒಂದು ಬಾರಿ ಮಾತ್ರ (29-01-2010)ರಲ್ಲಿ 3.1 ತೀವ್ರತೆ ದಾಖಲಾಗಿತ್ತು. ಇದನ್ನು ಹೊರತು ಪಡಿಸಿ ಉಳಿದೆಲ್ಲವೂ ಕಡಿಮೆ ತೀವ್ರತೆಯ ಭೂಕಂಪನಗಳು ಸಂಭವಿಸಿದ್ದವು. ಕಲಗುರ್ಕಿ ಗ್ರಾಮದಲ್ಲಿ ಅತೀ ಹೆಚ್ಚು ಬಾರಿ ಭೂಮಿ ಕಂಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X