ಐಪಿಎಲ್‌ 2023 | ಆರ್‌ಸಿಬಿ ತಂಡಕ್ಕೆ ಕನ್ನಡಿಗ ರಾಹುಲ್‌ ಪಡೆ ಸವಾಲು

Date:

Advertisements
ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಮಣಿಸುವ ಮೂಲಕ ಭರ್ಜರಿ ಆರಂಭಪಡೆದ ಆರ್‌ಸಿಬಿ ಕೆಕೆಆರ್‌ಗೆ ಹೀನಾಯವಾಗಿ ಸೋತಿತ್ತು.

ಐಪಿಎಲ್​ 16ನೇ ಆವೃತ್ತಿಯ 15ನೇ ಪಂದ್ಯದಲ್ಲಿ ಸೋಮವಾರ (ಏಪ್ರಿಲ್‌ 10) ಆರ್‌ಸಿಬಿ ಕಣಕ್ಕಿಳಿಯಲಿದೆ. ತವರು ಮೈದಾನದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಲಕ್ನೋ ಸೂಪರ್ ಜೈಂಟ್ಸ್‌ ಸವಾಲನ್ನು ಎದುರಿಸಲಿದೆ.

ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಮಣಿಸುವ ಮೂಲಕ ಆರ್‌ಸಿಬಿ ಭರ್ಜರಿ ಆರಂಭ ಪಡೆದಿತ್ತು. ಆದರೆ ಈಡನ್​ ಗಾರ್ಡನ್​ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಹೀನಾಯ ಸೋಲನುಭವಿಸಿತ್ತು. ಇಂದು ಮತ್ತೆ ತವರು ಮೈದಾನದಲ್ಲಿ ಫಾಫ್​ ನೇತೃತ್ವದ ಹುಡುಗರು, ಕನ್ನಡಿಗ ಕೆಎಲ್​ ರಾಹುಲ್​ ಸಾರಥ್ಯದ ಎಲ್‌ಎಸ್‌ಜಿ  ಪಾಳಯವನ್ನು ಎದುರಿಸಲು ಸಜ್ಜಾಗಿದ್ದಾರೆ. ಈ ಪಂದ್ಯದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದ್ದು, ಅಮೋಘ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಶತಕ ನಿರೀಕ್ಷೆಯಲ್ಲಿದ್ದಾರೆ.

ಕಳೆದ ಎರಡೂ ಪಂದ್ಯಗಳಲ್ಲಿ ಆರ್​ಸಿಬಿ ಅಂತಿಮ 5  ಓವರ್​ಗಳಲ್ಲಿ ಧಾರಾಳವಾಗಿ ರನ್​ಗಳನ್ನು ಬಿಟ್ಟುಕೊಟ್ಟಿದೆ. ಮೊದಲ ಪಂದ್ಯದಲ್ಲಿ ತಿಲಕ್​ ವರ್ಮ ಡೆತ್​ ಓವರ್​ಗಳಲ್ಲಿ ಸವಾರಿ ಮಾಡಿದರೆ, ಕೋಲ್ಕತ್ತಾ ಪಂದ್ಯದಲ್ಲಿ ಶಾರ್ದೂಲ್​ ಠಾಕೂರ್​ ಮನ ಬಂದಂತೆ ಆರ್‌ಸಿಬಿ ಬೌಲರ್‌ಗಳನ್ನು ದಂಡಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ರಿಂಕು ಸಿಂಗ್‌ ಸಿಕ್ಸರ್‌ಗಳ ಸುರಿಮಳೆ; ಗುಜರಾತ್‌ಗೆ ಮೊದಲ ಸೋಲು   

ಆರ್‌ಸಿಬಿಗೆ ಮೇಯರ್ಸ್ ಚಿಂತೆ

ಆರಂಭಿಕ ಕೈಲ್ ಮೇಯರ್ಸ್ ಅಬ್ಬರದ ಆಟ ಎಲ್​ಎಸ್​ಜಿಯ ಬ್ಯಾಟಿಂಗ್​ಗೆ ಬಲವಾಗಿದೆ. ಅವರು ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದಾರೆ. ನಿಕೋಲಸ್ ಪೂರನ್, ಮಾರ್ಕಸ್ ಸ್ಟೋಯ್ನಿಸ್‌, ಕ್ವಿಂಟನ್ ಡಿ ಕಾಕ್ ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ.

ಆರ್​ಸಿಬಿ ವಿರುದ್ಧದ ಪಂದ್ಯಗಳಲ್ಲಿ ತವರು ಮೈದಾನದ ಲಾಭ ಪಡೆದು ಕೆ ಎಲ್‌ ರಾಹುಲ್‌ ಉತ್ತಮವಾಗಿ ಬ್ಯಾಟ್‌ ಬೀಸಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧ ಮತ್ತೆ ರಾಹುಲ್​ ಅಬ್ಬರಿಸುವ ಸಾಧ್ಯತೆ ಇದೆ.

ಸಂಭಾವ್ಯ ತಂಡಗಳು

ರಾಯಲ್​ ಚಾಲೆಂಜರ್ಸ್​ ಬೆಂಗಳೂರು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮುಹಮ್ಮದ್ ಸಿರಾಜ್

ಲಕ್ನೋ ಸೂಪರ್​ ಜೈಂಟ್ಸ್​​: ಕೆಎಲ್ ರಾಹುಲ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೋಯ್ನಿಸ್/ ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಕೆ ಗೌತಮ್/ ಅಮಿತ್ ಮಿಶ್ರಾ, ಯಶ್ ಠಾಕೂರ್, ಅವೇಶ್ ಖಾನ್/ ಜಯದೇವ್ ಉನಾದ್ಕತ್, ಮಾರ್ಕ್ ವುಡ್, ರವಿ ಬಿಷ್ಣೋಯ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X