ವಿಜಯಪುರ | ಜಿಟಿಸಿಸಿ ತರಬೇತಿ ಕೇಂದ್ರ ಸ್ಥಾಪಿಸಲು ಶಾಸಕ ಯಶಚಂತರಾಯಗೌಡ ಪಾಟೀಲ್ ಒತ್ತಾಯ

Date:

Advertisements

ರಾಜ್ಯದ 31 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಜಿಟಿಸಿಸಿ ಕೇಂದ್ರಗಳಿವೆ. ಆದರೆ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾತ್ರ ಇಲ್ಲ. ಹೀಗಾಗಿ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಜಿಟಿಸಿಸಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು ಪ್ರಾರಂಭಿಸಬೇಕು ಎಂದು ಸರ್ಕಾರವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಿಗೆ ಜಿಟಿಸಿಸಿ ಸ್ಥಾಪನೆ ಬಗ್ಗೆ ಪ್ರಶ್ನೆ ಕೇಳಿದರು. “ಜಿಟಿಸಿಸಿ ಕೇಂದ್ರ ಮಂಜೂರು ಮಾಡಲು ಅನುಸರಿಸಬೇಕಾದ ಮಾನದಂಡಗಳು ಇಂಡಿ ತಾಲೂಕಿನಲ್ಲಿವೆ. ಇಂಡಿ ತಾಲೂಕು ಕಂದಾಯ ಉಪ ವಿಭಾಗಾಧಿಕಾರಿ ಕೇಂದ್ರವಾಗಿದೆ.
ಮತ್ತು ಇಂಡಿ ಪಟ್ಟಣದ ವಸಂತ ನಗರದಲ್ಲಿ ಸರ್ವೇ ನಂ.738ರಲ್ಲಿ ಯೋಜನೆಗೆ ಅವಶ್ಯವಿರುವ 19 ಎಕರೆ ಜಮೀನು ಇದೆ” ಎಂದು ತಿಳಿಸಿದರು.

“ಸರ್ಕಾರಕ್ಕೆ ಪ್ರಸ್ತಾವನೆಯಲ್ಲಿ ಕೂಡ ತಿಳಿಸಲಾಗಿದೆ. ಸಂಬಂಧಿತ ಕಡತ ಲಗ್ತಿಸಿದ್ದಲ್ಲದೆ, ಎಐಸಿಟಿ ಈ ಅಖಿಲ ಭಾರತ ತಾಂತ್ರಿಕ ಮಹಾವಿದ್ಯಾಲಯಗಳ ಒಕ್ಕೂಟದ ಮಾರ್ಗ ಸೂಚಿಯಂತೆ ಇಂಡಿ ತಾಲೂಕಿನಲ್ಲಿ 39 ಪ್ರೌಢಶಾಲೆಗಳಿವೆ. ಔದ್ಯೋಗ ತರಬೇತಿ ಕೇಂದ್ರ, ಝಳಕಿಯಲ್ಲಿ ಸರಕಾರಿ ಪಾಲಿಟೆಕ್ನಿಕ್ ಮತ್ತು ಖಾಸಗಿ ಇಂಜಿನಿಯರಿಂಗ್ ಮಹಾ ವಿದ್ಯಾಲಯಗಳಿವೆ” ಎಂದರು.

Advertisements

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಪ್ರಸ್ತಾವನೆ ಸರ್ಕಾರದ ಹಂತದಲ್ಲಿದೆ. ಸಾಧಕ ಬಾಧಕ ಪರಿಶೀಲಿಸಿ ಅರ್ಥಿಕ ಇಲಾಖೆಯ ಸಹ ಮತ ಮೇಲೆ ಜಿ.ಟಿ.ಸಿ.ಸಿ. ಕೇಂದ್ರ ಇಂಡಿಯಲ್ಲಿ ಸ್ಥಾಪಿಸಲು ಪರಿಶೀಲಿಸಲಾಗುವುದು” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X