ಕಲಬುರಗಿ | 3,000 ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಗ್ರಾ.ಪಂ. ಬಿಲ್‌ ಕಲೆಕ್ಟರ್

Date:

Advertisements

ಮನೆಯ ಜಿಪಿಎಸ್‌ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು 3,000 ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್‌ ಕಲೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು ಗ್ರಾಮ ಪಂಚಾಯತ್‌ ಬಿಲ್‌ ಕಲೆಕ್ಟರ್‌ ಬಾಬುರಾವ ಯಲಗೂರದಪ್ಪ ಬಂಧಿತ ಎಂದು ತಿಳಿದು ಬಂದಿದೆ.

ಹರನೂರು ಗ್ರಾಮದ ಈರಮ್ಮ ಮಾಡಿವಾಳ ಎಂಬುವರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರಾಗಿದ್ದು ಕೊನೆಯ ಕಂತು 30,000 ರೂ. ಬಾಕಿ ಇತ್ತು. ಇದಕ್ಕೆ ಜಿಪಿಎಸ್‌ ಮಾಡಿ ದಾಖಲೆ ಅಪ್ಲೋಡ್‌ ಮಾಡಲು 3,000 ರೂ.ಗೆ ಲಂಚಕ್ಕೆ ಬೇಡಿಯಿಟ್ಟಿದ್ದ, ಈ ಬಗ್ಗೆ ಈರಮ್ಮ ಗ್ರಾಮದ ನಾಗನಗೌಡ ಎಂಬುವರಿಗೆ ತಿಳಿಸಿದರು. ನಾಗನಗೌಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸುಳ್ಳು ಆರೋಪ: ತಪ್ಪು ಯತ್ನಾಳರದ್ದೋ, ಕಾಂಗ್ರೆಸ್ಸಿನವರದ್ದೋ?

ಜೇವರ್ಗಿ ಪಟ್ಟಣದ ನರಿಬೋಳ ಕ್ರಾಸ್‌ ಬಳಿ ಬೇಡಿಕೆಯಿಟ್ಟ ಹಣವನ್ನು ಮನೆಯ ಫಲಾನುಭನಿ ಈರಮ್ಮ ಬಿಲ್‌ ಕಲೆಕ್ಟರ್‌ ಬಾಬುರಾವ ಅವರಿಗೆ ಹಣ ತಲುಪಿಸುವ ವೇಳೆ ಲೋಕಾಯುಕ್ತ ಪೊಲೀಸ್‌ ಇನ್ಸ್ಪೆಕ್ಟರ್ ನಾನಾಗೌಡ ಪಾಟೀಲ್‌ ನೇತ್ರತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X