ವಿಜಯಪುರ | ಸಂತ ಜೋಸೆಫರ ಆರೋಗ್ಯ ಮತ್ತು ಸಮುದಾಯ ಭವನದಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನಾಚರಣೆ

Date:

Advertisements

ವಿಜಯಪುರ ನಗರದ ಸಂತ ಜೋಸೆಫರ ಆರೋಗ್ಯ ಮತ್ತು ಸಮುದಾಯ ಭವನದಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನಾಚರಣೆ ಹಾಗೂ ಕ್ರಿಸ್‌ಮಸ್ ಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಎಚ್ಐವಿ ಸೋಂಕಿತರು ಯಾವುದೇ ಭಯಪಡಬೇಕಾಗಿಲ್ಲ. ಅವರು ಸರಿಯಾದ ಜೀವನ ಕ್ರಮ ಮತ್ತು ಸದೃಢ ಮನೋಭಾವನೆ ಬೆಳೆಸಿಕೊಂಡರೆ ಅವರು ಕೂಡ ಜನ ಸಾಮಾನ್ಯರ ಹಾಗೆ ಬದುಕಬಹುದು. ಎಚ್‌ಐವಿ ಪೀಡಿತರಿಗೆ ಇರುವ ಚಿಕಿತ್ಸೆ ಸಂಪೂರ್ಣ ಉಚಿತವಾಗಿ ದೊರೆಯುತ್ತಿದೆ. ಸುಮಾರು ಶೇ.95ರಷ್ಟು ಜನರು ಎಚ್‌ಐವಿ ಸ್ಥಿತಿಗತಿ ಬಗ್ಗೆ ತಿಳಿದುಕೊಂಡಿದ್ದಾರೆ. ಕಾಲ ಕಾಲಕ್ಕೆ ಅವರಿಗೆ ಪರೀಕ್ಷೆ ಹಾಗೂ ಆಪ್ತಸಮಾಲೋಚನೆ ನೀಡಲಾಗುತ್ತಿದೆ.

ಇನ್ನು ಹೆಚ್ಚಿನ ಯಾವುದೇ ತೊಂದರೆ ಇದ್ದರೂ ಅವರು ದೃತಿಗೆಡಬಾರದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಏನೇ ತೊಂದರೆಯಾದರೂ ಅಥವಾ ಯಾವುದೇ ಸಹಾಯ ಬೇಕಾದರೆ ನನ್ನನ್ನು ಸಂಪರ್ಕಿಸಿ, ಮೊದಲ ಆದ್ಯತೆ ನೀಡಿ ಸ್ಪಂದಿಸುತ್ತೇವೆ ಎಂದು ಎಲ್ಲ ಎಚ್‌ಐವಿ ಪೀಡಿತರಿಗೆ ಭರವಸೆ ನೀಡಿದರು.

Advertisements

ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ಉಪನಿರ್ದೇಶಕ ಕೆ.ಕೆ. ಚವ್ಹಾಣ ಮಾತನಾಡಿ, ಎಚ್‌ಐವಿ ಪೀಡಿತರು ಸ್ವಾಭಿಮಾನದ ಬದುಕು ಕಟ್ಟಿಕೊಂಡು ಜೀವನ ಸಾಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಆಯೋಜಿಸಿದೆ. ಪ್ರತೀ ವರ್ಷ 35 ರಿಂದ 40 ಮಹಿಳೆಯರಿಗೆ ಧನಶ್ರೀ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಅದ್ದರಿಂದ ಮಹಿಳೆಯರು ಚಿಕ್ಕ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಅಲ್ಲದೆ, ಪ್ರತಿ ಎಚ್‌ಐವಿ ಪೀಡಿತ ಮಕ್ಕಳಿಗೆ ಪ್ರತಿ ತಿಂಗಳು ವಿಶೇಷ ಪಾಲನಾ ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನ ಕೂಡ ನೀಡಲಾಗುತ್ತಿದೆ. ಇಂತ ಎಲ್ಲ ಸೌಲಭ್ಯಗಳು ಪಡೆದು ಅವರು ಜನ ಸಾಮಾನ್ಯರಂತೆ ಘನತೆ ಬದುಕು ಸಾಗಿಸಲಿ ಎಂದು ಹಾರೈಸಿದರು.

ವಿಜಯಪುರ ಜಿಲ್ಲಾ ಸಂಘ ಸಂಸ್ಥೆಗಳ ಒಕ್ಕೂಟ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್  ಮಾತನಾಡಿ, ಮಾನವನ ಸೇವೆಯೆ ದೇವರ ಸೇವೆಯಾಗಿದೆ. ಸರ್ಕಾರ ಸಂಘ ಸಂಸ್ಥೆಗಳು ಅವುಗಳಿಗೆ ಬದ್ಧವಾಗಿದೆ. ಎಲ್ಲ ಸಮುದಾಯಗಳು ಕೈಗೂಡಿಸಿ ಕಾರ್ಯ ಮಾಡುವುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪಾಟಿಯೋಲ್ ಮಚಾದೊ ಮಾತನಾಡಿ, ನಾವು ನಮ್ಮಷ್ಟಕ್ಕೆ ಬದುಕುವುದರ ಜೊತೆಗೆ ಇನ್ನೊಬ್ಬರ ಬದುಕಲ್ಲಿ ಭರವಸೆ ನೀಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಅದಕ್ಕೆ ನಾವೆಲ್ಲರೂ ಈ ವರ್ಷದ ಘೋಷವಾಕ್ಯ ‘ಸಮುದಾಯಗಳು ಮುನ್ನಡೆಸಲಿ’ ಎಂಬಂತೆ ನಾವು ನೀವು ಕೂಡಿ ಸಾಕಾರ ಮಾಡುವುದಾಗಿದೆ ಮತ್ತು ಅದು ಯೇಸು ಕ್ರಿಸ್ತರ ಆಶಯವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ವಿಜಯಪುರ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂತ ಜೋಸೆಫರ ಆರೋಗ್ಯ ಮತ್ತು ಸಮುದಾಯ ಕೇಂದ್ರದ ಮುಖ್ಯಸ್ಥ ಸಿ.ಶಾಂತಿ ಮೇರಿ, ಸದಸಾನಿದ್ಯ ಮಕ್ಕಳು ಹಾಗೂ ಸಂತ ಜೋಸೆಪ್ ಮನೆಯ ಮಕ್ಕಳು ಕ್ರಿಸ್‌ಮಸ್ ಹಾಡು, ನೃತ್ಯ ಮಾಡಿ ಗಮನ ಸೆಳೆದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಸಂಯೋಜಕರಾದ ಭಾರತಿ ಪಾಟಲ್ ಹಾಗೂ ಡ್ಯಾಲ್ಯೂ ಜಿಲ್ಲಾ ಸಂಯೋಜಕ ಬಾಬುರಾದ ತಳವಾರ ಹಾಗೂ ವಿಜಯ ಕಾಂಬಳೆ, ಗಂಗಯ್ಯ, ಮಲ್ಲು, ಶಬ್ಬಿರ ಕಾಗಜಕೋಟ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X