ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಿಗೆ ಹಲ್ಲೆ; ಖಾಸಗಿ ಬಸ್‌ ಮಾಲೀಕನ ವಿರುದ್ಧ ಎಫ್ಐಆರ್

Date:

Advertisements

ಮಲೆನಾಡು ಭಾಗದಲ್ಲಿ ಸರ್ಕಾರಿ ಬಸ್‌ಗಳು ಓಡಾಡುವುದು ಕಡಿಮೆ. ಅಂತಹದರಲ್ಲಿ ಓಡಾಡುವ ಕೆಲವು ಬಸ್‌ಗಳ ಚಾಲಕರ ಮೇಲೆ ಖಾಸಗಿ ಬಸ್ ಮಾಲೀಕರು ದರ್ಪ ತೋರುತ್ತಿದ್ದು, ಕೆಎಸ್‌ಆರ್‌ಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ 9ರ ಸುಮಾರಿಗೆ ಶಿವಮೊಗ್ಗದಿಂದ ತೀರ್ಥಹಳ್ಳಿಯ ಮುಖ್ಯ ಬಸ್‌ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಂದಿದೆ. ತೀರ್ಥಹಳ್ಳಿಯ ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್ಸಿನ ಮಾಲೀಕ ಮಧು ಎಂಬಾತ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಚಾಲಕನನ್ನು ಕೆಳಗಿಳಿಸಿ ಬಸ್‌ನ ಕೀ ತೆಗೆದುಕೊಂಡು ಡ್ರೈವರ್ ಹಾಗೂ ಕಂಡಕ್ಟರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಶಕ್ತಿಯೋಜನೆ ಉಪಯೋಗಿಸಿಕೊಂಡು ನಮ್ಮ ಬಸ್‌ಗಳಿಗೆ ನಷ್ಟ ಉಂಟು ಮಾಡುತ್ತಿದ್ದೀರಾ ಎಂದು ರಂಪಾಟ ಮಾಡಿ ಹಲ್ಲೆ ನಡೆಸಿದ್ದಾರೆ.

“ಬಡವರು ಮತ್ತು ಕೆಲಸ ಮಾಡುವ ಮಹಿಳೆಯರು ಸೇರಿದಂತೆ ಶಾಲೆ ಕಾಲೇಜು ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂದು ಕಾಂಗ್ರೆಸ್‌ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಖಾಸಗಿ ಮಾಲೀಕರಿಗೆ ನಷ್ಟ ಉಂಟಾಗುತ್ತಿದೆ ಎಂಬ ಕಾರಣಕ್ಕೆ ಆ ಕೋಪವನ್ನು ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್ ಮತ್ತು ಕಂಡಕ್ಟರ್‌ಗಳ ಮೇಲೆ ತೋರಿಸುವುದು ಯಾವ ನ್ಯಾಯ” ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ʼಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿʼ

ಈ ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಖಾಸಗಿ ಬಸ್‌ ಮಾಲೀಕನ ವಿರುದ್ಧ ಸರ್ಕಾರಿ ಉದ್ಯೋಗಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X