ಬಿಜೆಪಿ ನಾಯಕರ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥ: ಸಿದ್ದರಾಮಯ್ಯ

Date:

Advertisements

ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇವತ್ತಿನವರೆಗೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ” ಎಂದರು.

“ಬಿಜೆಪಿಯೊಳಗೆ ಸಮನ್ವಯ ಸಾಧ್ಯವೇ ಇಲ್ಲ. ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ” ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ”ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿವೆ” ಎಂದು ಹೇಳಿದರು.

Advertisements

ತಪ್ಪಿತಸ್ಥರ ವಿರುದ್ಧ ಕ್ರಮ

“ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ ಮಾತನಾಡಿ ಯಾರು ತಪ್ಪಿತಸ್ಥರೋ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

ಪಂಚಾಮಸಾಲಿ: ಸ್ವಾಮೀಜಿಯವರೊಂದಿಗೆ ಮಾತನಾಡುತ್ತೇನೆ

“ಪಂಚಾಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು 13 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡಲಾಗುವುದು. ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿಯವರೊಂದಿಗೆ ಮಾತನಾಡುತ್ತೇನೆ” ಎಂದು ತಿಳಿಸಿದರು.

ಸಭಾಧ್ಯಕ್ಷರ ನಿರ್ಧಾರಕ್ಕೆ ಬಿಟ್ಟಿದ್ದು

ಸುವರ್ಣ ಸೌಧದಲ್ಲಿರುವ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ”ಅದು ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು” ಎಂದರು.

ಬಿಜೆಪಿ ಮತ್ತು ಜೆಡಿಎಸ್ ಭ್ರಮಾಲೋಕದಲ್ಲಿದ್ದಾರೆ

ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, “ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದ್ದು, ಭ್ರಮಾಲೋಕದಲ್ಲಿದ್ದಾರೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X