ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ನಮ್ಮ ಸಹಕಾರ ಇದೆ: ಡಿ ಕೆ ಶಿವಕುಮಾರ್

Date:

Advertisements

ವಿರೋಧ ಪಕ್ಷದ ಶಾಸಕರಾಗಲಿ, ಆಡಳಿತ ಪಕ್ಷದ ಶಾಸಕರಾಗಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರೆ ಸ್ಪಂದಿಸಲು‌ ಸರ್ಕಾರ ಸಿದ್ಧವಾಗಿದೆ‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು‌ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದರು.

ಅಧಿವೇಶನದಲ್ಲಿ‌ ಉತ್ತರ ಕರ್ನಾಟಕದ ಸಮಸ್ಯೆಗಳ‌ ಬಗ್ಗೆ‌ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಿತ್ತೂರು‌ ಕರ್ನಾಟಕ, ಹಳೇ ಮೈಸೂರು ಕರ್ನಾಟಕ ಸೇರಿದಂತೆ ನಮ್ಮದು ಸಮಗ್ರ ಕರ್ನಾಟಕ. ವಿಧಾನಸಭೆಯಲ್ಲಿ ಚರ್ಚೆ ನಡೆಸಲು ನಾವು ಸದಾ ಸಹಕಾರ ನೀಡುತ್ತೇವೆ” ಎಂದು ತಿಳಿಸಿದರು.

Advertisements

ಬೆಳಗಾವಿ ಜಿಲ್ಲೆ‌‌ ವಿಭಜನೆಗೆ ಕೂಗು ಕೇಳಿ ಬರುತ್ತಿದ್ದು, ಇಂದು ಕರೆ ನೀಡಲಾಗಿರುವ ಬಂದ್ ಬಗ್ಗೆ ಕೇಳಿದಾಗ “ಸದನದಲ್ಲಿ ಈ ವಿಚಾರದ ಬಗ್ಗೆ ಪ್ರಸ್ತಾವನೆ ಬಂದಾಗ‌ ಖಂಡಿತ ಚಿಂತನೆ ಮಾಡುತ್ತೇವೆ” ಎಂದರು.

ಸಾವರ್ಕರ್ ಫೋಟೊ ತೆರವು ವಿಚಾರ

ಪ್ರಿಯಾಂಕ್ ಖರ್ಗೆ‌ ಅವರು ವಿಧಾನಸಭೆಯಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಹೇಳಿಕೆ‌ಗೆ ಬದ್ಧ ಎಂದು ಹೇಳಿದ್ದಾರೆ ಇದಕ್ಕೆ ಸರ್ಕಾರದ ನಿಲುವು ಏನು ಎಂದು ಕೇಳಿದಾಗ “ಅದು ಸದನದ ಮತ್ತು ಸಭಾಧ್ಯಕ್ಷರ ಸ್ವತ್ತು. ಈ ವಿಚಾರವಾಗಿ ಆನಂತರ ಮಾತನಾಡುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X