ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ ಆರ್ಟಿಕಲ್ 370ರಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವುದನ್ನು ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ, ಕಾಶ್ಮೀರಿ ಪಂಡಿತರು ತಮ್ಮ ಹಿಂದಿನ ತಾಯ್ನಾಡಿಗೆ ಸುರಕ್ಷಿತವಾಗಿ ಮರಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ನೀಡುವರೇ ಎಂದು ಅವರು ಪ್ರಶ್ನಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
‘ಪಿಒಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ) ಕಾಶ್ಮೀರದಲ್ಲಿ ವಿಲೀನಗೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಇದರಿಂದಾಗಿ ನಮ್ಮ ದೇಶದ ಬೇರ್ಪಡಿಸಲಾಗದ ಭಾಗವಾಗಿರುವ ದೊಡ್ಡ ಕಾಶ್ಮೀರದಲ್ಲಿ ಚುನಾವಣೆಗಳು ನಡೆಯುತ್ತವೆ’ ಎಂದು ಠಾಕ್ರೆ ಹೇಳಿದರು.
ಕಾಶ್ಮೀರ ಪಂಡಿತರ ಸ್ಥಿತಿಗತಿ ಕುರಿತು ಪ್ರಶ್ನಿಸಿದ ಅವರು, “ಗ್ಯಾರಂಟಿ ಎಂಬ ಪದವು ಪ್ರಸಿದ್ಧವಾಗಿದೆ. ಕಾಶ್ಮೀರಿ ಪಂಡಿತರು ಈಗ ಮನೆಗೆ ಮರಳುತ್ತಾರೆ ಮತ್ತು ಅವರ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ ಎಂಬ ಭರವಸೆಯನ್ನು ಯಾರು ನೀಡುತ್ತಾರೆ ಎಂದು ನಾವು ತಿಳಿಯಬೇಕಾಗಿದೆ. ಪ್ರಧಾನಿ ಮೋದಿ ನಮಗೆ ಭರವಸೆ ನೀಡುತ್ತಾರೆಯೇ? ಕಾಶ್ಮೀರಿ ಪಂಡಿತರು ಸುರಕ್ಷಿತವಾಗಿ ತಮ್ಮ ರಾಜ್ಯಕ್ಕೆ ಮರಳುತ್ತಾರೆಯೇ?” ಎಂದು ಅವರು ಪ್ರಶ್ನಿಸಿದರು.