ದಾವಣೆಗೆರೆ | ಚಿತ್ರದುರ್ಗ ಜಿಲ್ಲೆಗೆ ಜಗಳೂರು?; ಶಾಸಕ ದೇವೇಂದ್ರಪ್ಪ ಹೇಳಿದ್ದೇನು?

Date:

Advertisements

ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವ ವಿಚಾರಕ್ಕೆ ನನ್ನ ಗಮನಕ್ಕಿಲ್ಲ. ತಾಲೂಕು ದಾವಣಗೆರೆ ಜಿಲ್ಲೆಯಲ್ಲೇ ಉಳಿಯಬೇಕು ಎಂಬ ಅಭಿಪ್ರಾಯಗಳೂ ಇವೆ. ಸಾರ್ವಜನಿಕರಿಗೆ ಎಲ್ಲಿ ಹಿತವೆನಿಸುತ್ತದೆಯೋ ಅವರ ಪರವಾಗಿ ನಾನು ಇರುತ್ತೇನೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲೇ ಜಗಳೂರು ತಾಲೂಕು ಇರಬೇಕು ಎಂದು ಹೋರಾಟ ಸಮಿತಿಯು ಒತ್ತಾಯಿಸಿದೆ. “ಜಗಳೂರು ಚಿತ್ರದುರ್ಗಕ್ಕೆ ಮರು ಸೇರ್ಪಡೆಯಿಂದ ಸಾಕಷ್ಟು ಸಮಸ್ಯೆ, ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ, ದಾವಣಗೆರೆ ಜಿಲ್ಲೆಯಲ್ಲಿಯೇ ಉಳಿಯಬೇಕು. ಇದಕ್ಕೆ ಸಹಕಾರ ನೀಡಬೇಕು” ಎಂದು ಶಾಸಕರಿಗೆ ಮನವಿ ಸಲ್ಲಿಸಿದೆ.

ಹೋರಾಟಗಾರರ ಮನವಿ ಸ್ವೀಕರಿಸಿ ಅವರು ಮಾತನಾಡಿದರು. “ಜಗಳೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಬೇಕಾಗಿದೆ. ಕೆರೆಗಳಿಗೆ ನೀರು ತುಂಬಿಸಬೇಕಾಗಿದೆ. ಬರ ನಿರ್ವಹಣೆ ಮಾಡಬೇಕಾಗಿದೆ. ನನ್ನ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಆದ್ದರಿಂದ ಎಲ್ಲರೂ ಒಗ್ಗೂಡಿ ತೀರ್ಮಾನ ಕೈಗೊಳ್ಳಲಾಗುವುದು. ಕ್ಷೇತ್ರ ಮುಂದಿನ ಐದು ವರ್ಷಗಳಲ್ಲಿ ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರು ಸಂಪೂರ್ಣ ಸಹಕಾರ ನೀಡಬೇಕು” ಎಂದರು.

Advertisements

ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲೇ ಜಗಳೂರು ತಾಲೂಕನ್ನು ಉಳಿಸುವ ಹೋರಾಟದ ಸಮಿತಿಯ ಮುಖಂಡ ಸುಭಾಷ್‌ಚಂದ್ರ ಭೋಸ್, ಹಿರಿಯ ವಕೀಲರಾದ ಬಸವರಾಜಪ್ಪ, ಶಿವನಗೌಡ, ಬಸಾಪುರ ರವಿಚಂದ್ರ, ಹೆಚ್.ಸಿ.ಮಹೇಶ್, ಜಿ.ಹೆಚ್. ಶಂಭುಲಿಂಗಪ್ಪ, ಚಂದ್ರನಾಯ್ಕ, ವೈ.ಎನ್.ಮಂಜುನಾಥ್, ಓಮಣ್ಣ, ದಿದ್ದಿಗೆ ಕರಿಬಸವನಗೌಡ, ನಾಗರಾಜ್‌ನಾಯಕ್, ಶಿವಕುಮಾರ್‌ಸ್ವಾಮಿ, ಗೋಗುದ್ದು ರಾಜು, ಗೋಡೆ ಪ್ರಕಾಶ್, ವೀರೇಂದ್ರ ಪಾಟೀಲ್, ಎಂ.ಎಸ್.ಪಾಟೀಲ್, ಡೆಂಕಪ್ಪ ಬಸವರಾಜ್, ಬೆಲ್ಲದ ಬಸವರಾಜ್, ಗಿರೀಶ್, ಜಗದೀಶ್‌ ಗೌಡ್ರು, ಹರೀಶ್, ದೀಪಕ್‌ ಪಾಟೀಲ್, ಅಸಗೋಡು ಸುರೇಶ್‌ ಗೌಡ್ರು, ಅಥ್‌ರ್, ಗುರುಮೂರ್ತಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X