ಬೆಂಗಳೂರು | ಹೊಸ ವರ್ಷಕ್ಕೆ ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ವಶ

Date:

Advertisements

2023 ಮುಗಿದು 2024ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ಅನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಮೂಲದ ಲಿಯೋನಾರ್ಡ್ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.

ವೀಸಾ ಮೂಲಕ ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ಲಿಯೋನಾರ್ಡ್‌ ಹೊಸ ವರ್ಷಕ್ಕೆಂದು ಅಪಾರ ಪ್ರಮಾಣದ ಡ್ರಗ್ಸ್‌ ತಂದು ಶೇಖರಣೆ ಮಾಡಿ ಇಟ್ಟಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ.

Advertisements

ಡಿ.31 ರಂದು ರಾತ್ರಿ ಹೊಸ ವರ್ಷಾಚರಣೆಗೆ ಹಲವೆಡೆ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಈ ವೇಳೆ, ಕೆಲ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಕೆ ಮಾಡಲು ಆರೋಪಿ ಸಜ್ಜಾಗಿದ್ದನು. ಬಂಧಿತ ಆರೋಪಿ ಪೆಡ್ಲರ್ ಆಗಿದ್ದಾನೆ. ಈತ ತನ್ನದೇ ಒಂದು ಗ್ಯಾಂಗ್ ಕಟ್ಟಿಕೊಂಡು ಬೆಡ್​ಶೀಟ್​​ ಕವರ್​​, ಸೋಪ್​​ ಬಾಕ್ಸ್​​​ ಹಾಗೂ ಚಾಕೊಲೇಟ್​ ಬಾಕ್ಸ್​ನಲ್ಲಿ ಡ್ರಗ್ಸ್​ ಸಾಗಾಟ ಮಾಡುತ್ತಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆನ್ಸಿಂಗ್ಟನ್ ಜಂಕ್ಷನ್ ಸಮೀಪದ ರಸ್ತೆ ಕುಸಿತ: ದೊಡ್ಡ ಗುಂಡಿ ನಿರ್ಮಾಣ

ಈತನಿಂದ ಸಿಸಿಬಿ ಪೊಲೀಸರು 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೇನ್, ಮೂರು ತೂಕದ ಯಂತ್ರ, ಮೊಬೈಲ್ ಜಪ್ತಿ ಮಾಡಲಾಗಿದೆ.

ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X