ಬೆಂಗಳೂರು | ಠಾಣೆಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಸಬ್‌ ಇನ್ಸ್‌ಪೆಕ್ಟರ್‌ ; ಟ್ವೀಟ್‌ನಲ್ಲಿ ದೂರು

Date:

Advertisements
  • ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ ಸರಣಿ ಟ್ವೀಟ್‌
  • ಮಹಿಳೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್

ಪ್ರಕರಣವೊಂದರಲ್ಲಿ ಹೇಳಿಕೆ ನೀಡಲು ತೆರಳಿದ್ದ ಮಹಿಳೆಯ ಮೇಲೆ ಬೆಂಗಳೂರಿನ ಸುದ್ದನಗುಂಟೆ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಿರುಕುಳ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪೊಲೀಸರು ಮಹಿಳೆಯನ್ನು ಕೇಳಿದ್ದಾರೆ.

ಸಂತ್ರಸ್ತ ಮಹಿಳೆ ಟ್ವಿಟರ್‌ನಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ತನ್ನ ಮೇಲಾದ ದೌರ್ಜನದ ಬಗ್ಗೆ ಹೇಳಿಕೊಂಡಿದ್ದಾರೆ.

ಶೀತಲ್ ಸುಹಾನ ಅಬ್ರಹಾಂ ಎಂಬ ಮಹಿಳೆ ಟ್ವೀಟ್‌ ಮಾಡಿದ್ದು, “ಏ.8ರಂದು ಸ್ನೇಹಿತನ ಸಹೋದರನ ಪರವಾಗಿ ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಗೆ ತೆರಳಿದ್ದೆ. ಈ ವೇಳೆ, ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಮಂಜುನಾಥ ಸ್ವಾಮಿ ಅವರು ನನ್ನ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಜತೆಗೆ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆಋಓಪಿಸಿದ್ದಾರೆ.

Advertisements

ಮಹಿಳೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ,​ ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ

ಮಹಿಳೆ ಹೇಳಿರುವುದೇನು?

ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಸಹೋದರನ ಪರವಾಗಿ ಹೇಳಿಕೆ ನೀಡಲು ಠಾಣೆಗೆ ತೆರಳಿದ್ದೆ. ಆದರೆ, ಪೊಲೀಸ್ ಸ್ಟೇಷನ್‌ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಬಿ.ಸಿ ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ.

https://twitter.com/SusanSheethal/status/1645385528932728833?s=20

ಪೋಲೀಸರು ನಾನು ಹೇಳಿಕೆ ನೀಡುವ ವೇಳೆ ಹೇಳಿಕೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ, ಅವರು ಕರೆ ಮಾಡಿದಾಗ ಬರಲು ತಿಳಿಸಿದರು. ನಾನು ಮನೆಗೆ ಬಂದ ನಂತರ ನನ್ನ ಚಿತ್ರಗಳನ್ನು ಕಳುಹಿಸಲು ಕೇಳಿದರು. ಅವರು ತಡರಾತ್ರಿ ವಾಟ್ಸ್‌ಆಪ್‌ನಲ್ಲಿ ಮೆಸೇಜ್‌ ಕಳುಹಿಸಲು ಪ್ರಾರಂಭಿಸಿದರು. ಆದರೆ, ನಾನು ಅದನ್ನು ನಿರ್ಲಕ್ಷಿಸಿದೆ. ಈ ಘಟನೆಯಿಂದ ನನಗೆ ಭಯವಾಗಿದೆ. ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದೇನೆ. ಈ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ನನಗೆ ತಿಳಿದಿಲ್ಲ. ದಯವಿಟ್ಟು ಸಲಹೆ ನೀಡಿ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X