ಗದಗ | ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆಯಾಗುತ್ತಿದೆ ವಿವಿ; ಮುತ್ತು ಬಿಳಿಯಲಿ ಆರೋಪ

Date:

Advertisements

ಎಚ್.ಕೆ ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಿದ್ದಾಗ ಗದಗಿಗೆ ಕೊಡುಗೆಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯನ್ನು ಸ್ಥಾಪಿಸಿದರು. ಆದರೆ, ಈಗ ವಿವಿ ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆ ಆಗುತ್ತಿದೆ ಎಂದು ದಲಿತ ಪರ ಹೋರಾಟಗಾರ ಮುತ್ತು ಬಿಳಿಯಲಿ ಆರೋಪಿಸಿದ್ದಾರೆ.

ಗದಗ ಪಟ್ಟಣದಲ್ಲಿ ಡಿ.13ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಈಗ ಆರ್.ಎಸ್.ಎಸ್ ಶಾಖೆಯಾಗಿ ಪರಿವರ್ತನೆಯಾಗಿದೆ. ಈಗ ಕಾರ್ಯನಿರ್ವಹಿಸುತ್ತಿರುವ ಕುಲಪತಿ ವಿಷ್ಣುಕಾಂತ ಚಟಪಲ್ಲಿ ಆರ್.ಎಸ್.ಎಸ್‌ನ ಕಾರ್ಯಕರ್ತನಂತೆ ವರ್ತಿಸುತ್ತಿದ್ದಾರೆ. ಇವರು ವಿಶ್ವವಿದ್ಯಾಲಯಕ್ಕೆ ಕಾಲಿಟ್ಟಾಗಿಲಿಂದಲೂ ಕೋಮುವಾದಿ ಸಂಘಟನೆಯ ಸಹಕಾರದಿಂದ ವಿಶ್ವವಿದ್ಯಾಲಯದಲ್ಲಿ ಒಂದಿಲ್ಲೊಂದು ಕಾರ್ಯಕ್ರಮವನ್ನು ಮಾಡುತ್ತ ಬರುತ್ತಿದ್ದಾರೆ ಎಂದು ಮುತ್ತು ಬಿಳಿಯಲಿ ಆರೋಪಿಸಿದರು.

ಇದೀಗ ತಾಜಾ ಉದಾಹರಣೆ ಅಂದರೆ, ಇದೇ ತಿಂಗಳು 17ರಂದು ವಿಶ್ವವಿದ್ಯಾಲಯದಲ್ಲಿ ಆರ್.ಎಸ್.ಎಸ್‌ನ ಸಹಭಾಗಿ ಸಂಘಟನೆಗಳೊಂದಿಗೆ ವಚನ ದರ್ಶನ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮದ ಎಲ್ಲ ಅತಿಥಿಗಳು ಆರ್.ಎಸ್.ಎಸ್ ನ ಭಾಗವಾಗಿರುವವರು. ಆಶ್ಚರ್ಯ ಅಂದರೆ ಅತಿಥಿಗಳ ಪಟ್ಟಿಯಲ್ಲಿ ನಮ್ಮ ರಾಜ್ಯದ ವೈಚಾರಿಕ ಮಠಗಳಲ್ಲಿ ಒಂದು ಎಂದು ಅನ್ನಿಸಿಕೊಳ್ಳುವ ಗದಗನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿಗಳು ಇದ್ದಾರೆ.

Advertisements

12 ನೇ ಶತಮಾನದಲ್ಲಿ ಬಸವಣ್ಣನವರು ಹಾಗೂ ಬಸವಾದಿ ಶರಣರ ಜೊತೆ ಸೇರಿ ಸನಾತನದ ವಿರುದ್ಧ ವಚನ ಚಳುವಳಿಯನ್ನು ಕಟ್ಟಿದರು ಬಸವ ತತ್ವ ಅನುಸರಿಸುವ ಸಿದ್ಧರಾಮ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ದುರಂತ.

ಇಡೀ ಬಸವ ತತ್ವದ ವಿರೋಧಿಯಾಗಿ, ಸಮಾನತೆಯ ವಿರೋಧಿಯಾಗಿ ಪ್ರಜಾಪ್ರಭುತ್ವದ ವಿರುದ್ಧ ಕೆಲಸ ಮಾಡುವ ಆರ್.ಎಸ್.ಎಸ್ ಇಂತಹ ಕಾರ್ಯಕ್ರಮಕ್ಕೆ ಸಿದ್ಧರಾಮ ಸ್ವಾಮೀಜಿಗಳು ಗೊತ್ತಿದ್ದು ಹೋಗಿರೋದ ಅಥವಾ ಗೊತ್ತಿಲ್ಲದೆ ಹೋಗಿರೋದ ಎಂದು ಅವರೆ ಸ್ಪಷ್ಟಪಡಿಸಬೇಕು.

ಈಗಿನ ಕುಲಪತಿ ಈ ಹಿಂದೆಯೂ ಎಬಿವಿಪಿಯ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದಲ್ಲಿ ಮಾಡಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ಆರ್.ಎಸ್.ಎಸ್ ಕೇಂದ್ರವನ್ನಾಗಿ ಮಾರ್ಪಡಿಸುತ್ತಿದ್ದಾರೆ ಎಂಬ ಅನುಮಾನಗಳಿವೆ.

ಈಗಿನ ಕುಲಪತಿಯಿಂದ ವಿಶ್ವವಿದ್ಯಾಲಯವನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. 17ರಂದು ನಡೆಯುವ ಕಾರ್ಯಕ್ರಮ ತಡೆಯೋಣ ವಿಶ್ವವಿದ್ಯಾಲಯವನ್ನು ಉಳಿಸೋಣ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X