ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

Date:

Advertisements

ಬೆಂಗಳೂರಿನ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಏಕಾಏಕಿ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿದೆ. ಈ ಗುಂಡಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಮಹಾ ಗುಂಡಿಗೆ ಪೂಜೆ ಮಾಡಿ ಪ್ರತಿಭಟನೆ ನಡೆಸಿದರು.

“ವೈಟ್ ಟಾಪಿಂಗ್ ರಸ್ತೆ ಕುಸಿದಿದ್ದು, ಯಾವುದೇ ನಾಗರಿಕರನ್ನು ಬಲಿ ತೆಗೆದುಕೊಳ್ಳದೆ ಅನುಕಂಪ ತೋರಿರುವ ಮಹಾ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕೃತಜ್ಞತೆಯನ್ನು ಸಲ್ಲಿಸಿದ್ದೇವೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು.

“ವೈಟ್ ಟಾಪಿಂಗ್ ಹೆಸರಿನಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಇದು ರಾಜಕಾರಣಿಗಳಿಗೆ ಚಿನ್ನದ ಮೊಟ್ಟೆಯಿಡುವ ಕೋಳಿಯಾಗಿದೆ. ಕೇವಲ ಒಂದು ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು ಮಾಡಲಾಗಿದೆ. ಇಷ್ಟು ಹಣ ಖರ್ಚು ಮಾಡಿದರೂ, ರಸ್ತೆ ಕುಸಿದಿದೆ. ಸಾಮಾನ್ಯ ಟಾರ್ ರಸ್ತೆ ಹಾಕಿದ್ದಕ್ಕಿಂತ ಇದು ಕೆಟ್ಟದಾಗಿದೆ” ಎಂದರು.

Advertisements

“ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಗಳ ಆಡಿಟ್ ಆಗಬೇಕು. ಈ ರಸ್ತೆಯನ್ನು ನಿರ್ಮಿಸಿ 9 ತಿಂಗಳಾಗಿದ್ದು, ಈಗಾಗಲೇ ಗುಂಡಿ ಬಿದ್ದಿದೆ ಎಂದರೆ ಎಷ್ಟು ಭ್ರಷ್ಟಾಚಾರ ಆಗಿದೆ ಎಂಬುದು ಗೊತ್ತಾಗುತ್ತದೆ. ನಾವು ಈ ವಿಚಾರವನ್ನು ಇಲ್ಲಿಗೆ ಸುಮ್ಮನೆ ಬಿಡುವುದಿಲ್ಲ. ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ. ಕಳೆದ 5-10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್, ಸ್ಮಾರ್ಟ್ ಸಿಟಿಯಡಿ ಮಾಡಿರುವ ರಸ್ತೆಗಳ ಆಡಿಟ್ ಆಗಬೇಕು. ಲೋಕಾಯುಕ್ತರು ಸ್ವತಂತ್ರವಾಗಿ ತನಿಖೆ ನಡೆಸಿ, ಗುತ್ತಿಗೆದಾರರನ್ನು ಶಾಶ್ವತವಾಗಿ ಬ್ಯಾನ್ ಮಾಡಬೇಕು” ಎಂದು ಆಗ್ರಹಿಸಿದರು.

“ಬಿಬಿಎಂಪಿ ಕಮಿಷನರ್‌ರನ್ನು ಭೇಟಿ ಮಾಡುತ್ತೇವೆ. ಬೇರೆ ವೈಟ್ ಟಾಪಿಂಗ್ ಕಾಮಗಾರಿಗೆ ಅನುಮತಿ ನೀಡುವ ಮೊದಲು ಈಗಾಗಲೇ ಪೂರ್ಣಗೊಂಡಿರುವ ವೈಟ್ ಟಾಪಿಂಗ್ ರಸ್ತೆಗಳ ಗುಣಮಟ್ಟ ಪರೀಕ್ಷೆ ಮಾಡಿಸಲಿ. ಗುಂಡಿ ಬಿದ್ದ ರಸ್ತೆಯನ್ನು ನಿರ್ಮಿಸಿದ ಗುತ್ತಿಗೆದಾರರನ್ನು ಬ್ಯಾನ್ ಮಾಡಬೇಕು. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವವರೆಗೂ ಈ ರೀತಿ ಭ್ರಷ್ಟಾಚಾರ ನಡೆಯುತ್ತಿರುತ್ತದೆ” ಎಂದು ಹೇಳಿದರು.

“ವೈಟ್‌ ಟಾಪಿಂಗ್‌ ಮಾಡುವ ಮೊದಲು ಈ ರಸ್ತೆ ಚನ್ನಾಗಿತ್ತು. ದುಡ್ಡು ಮಾಡಲು ಇಲ್ಲಿ ವೈಟ್ ಟಾಪಿಂಗ್ ಮಾಡಲಾಗಿದ್ದು, ₹15 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ” ಎಂದು ಹೇಳಿದರು.

“ಗುಂಡಿ ಬೀಳುವುದರಲ್ಲಿ ನಮ್ಮ ಸಮಸ್ಯೆ ಇಲ್ಲ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳು ಹೇಳುತ್ತಾರೆ. ರಾತ್ರೋ ರಾತ್ರಿ ಜಲ್ಲಿ ಹಾಕಿ ಮುಚ್ಚಲಾಗಿದೆ. ಆದರೆ, ಈ ಸಮಸ್ಯೆ ಉಂಟಾಗಲು ಕಾರಣವೇನು ಎಂದು ಪ್ರಶ್ನಿಸಿದರು. ಗುಣಮಟ್ಟ ಪರೀಕ್ಷೆ ನಡೆಸಿದ್ದರೆ ಇದು ಬಯಲಾಗುತ್ತಿತ್ತು. ಈಗ ಸೂಕ್ತವಾದ ತನಿಖೆ ನಡೆಯಲಿ. ರಾತ್ರಿ ಯಾರು ಓಡಾಡದಿರುವುದು ಅದೃಷ್ಟ. ಅಕಸ್ಮಾತ್ ಯಾರಾದರೂ ಬಿದ್ದಿದ್ದರೆ ಜೀವವೇ ಹೋಗುತ್ತಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಂಗ್ರೆಸ್, ಬಿಜೆಪಿ ಅಣ್ಣ ತಮ್ಮಂದಿರಂತೆ ಇದ್ದು, ಎಲ್ಲರೂ ಹಂಚಿಕೊಂಡು ತಿನ್ನುತ್ತಿದ್ದಾರೆ. ಬಿಬಿಎಂಪಿ ಚುನಾವಣೆ ಮುಂದೂಡಲು ಕಾರಣವೇನು, ಬಿಜೆಪಿ, ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡುತ್ತಿವೆ” ಎಂದು ಆರೋಪಿಸಿದರು.

ಪ್ರತಿಭಟನೆ ವೇಳೆ, ಬೆಂಗಳೂರು ಉಸ್ತುವಾರಿ ಡಿಕೆ ಶಿವಕುಮಾರ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಕೆಟ್ಟ ರಸ್ತೆಗಳನ್ನು ನಿರ್ಮಿಸಿ ಭ್ರಷ್ಟಾಚಾರ ಮಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ರಿಜ್ವಾನ್ ಅರ್ಷದ್ ನಾಪತ್ತೆಯಾಗಿದ್ದು, ಹುಡುಕಿಕೊಡಿ ಎಂದು ಘೋಷಣೆ ಕೂಗಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸರನ್ನು ಆಟವಾಡಿಸಲು ರಾಜಭವನಕ್ಕೆ ಬಾಂಬ್‌ ಬೆದರಿಕೆ: ಬಂಧನ

ಪ್ರತಿಭಟನೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಫರೀದುದ್ದೀನ್ ಶರೀಫ್, ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಮಹಿಳಾ ಮುಖಂಡೆ ಮರಿಯ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X