ಬೆಂಗಳೂರು | ಚಾಲಕ ರಹಿತ ನಮ್ಮ ಮೆಟ್ರೋ: ಚೀನಾದ 21 ಎಂಜಿನಿಯರ್‌ಗಳಿಗೆ ಭಾರತದ ವೀಸಾ

Date:

Advertisements

ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲು ಬೆಂಗಳೂರಿನಲ್ಲಿ ಆರಂಭಗೊಳ್ಳಲಿದೆ. ಹಳದಿ ಮಾರ್ಗದಲ್ಲಿ ಈ ರೈಲು ಸಂಚಾರ ಆರಂಭಿಸಲಿದೆ. ಈ ಹಿನ್ನೆಲೆ, ಚೀನಾ ರೈಲ್ವೆ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ (ಸಿಆರ್‌ಆರ್‌ಸಿ)ಯ ಲೋಕೋ-ಪೈಲಟ್‌ಗಳು, ತಂತ್ರಜ್ಞರು ಮತ್ತು ಎಂಜಿನಿಯರ್‌ ಒಳಗೊಂಡ 21 ಚೀನಾದ ತಾಂತ್ರಿಕ ಸಿಬ್ಬಂದಿ ಭಾರತಕ್ಕೆ ಭೇಟಿ ನೀಡಲು ವೀಸಾ ಪಡೆದಿದೆ.

ಚೀನಾ ರೈಲ್ವೆ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ (ಸಿಆರ್‌ಆರ್‌ಸಿ) ಎಂಜಿನಿಯರ್, ಲೋಕೋ ಪೈಲೆಟ್ ಹಾಗೂ ಟೆಕ್ನಿಕಲ್ ಸಿಬ್ಬಂದಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಭಾರತ ಸರ್ಕಾರ ವೀಸಾ ನೀಡಿದೆ. ಒಟ್ಟು 64 ಸಿಬ್ಬಂದಿ ಬೆಂಗಳೂರಿಗೆ ಆಗಮಿಸಲಿದ್ದು, ಈ ಪೈಕಿ 21 ಮಂದಿಗೆ ವೀಸಾ ನೀಡಲಾಗಿದೆ. ಇನ್ನುಳಿದ ಸಿಬ್ಬಂದಿ ಡೇಟಾ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಚೀನಾ ರೈಲ್ವೆ ರೋಲಿಂಗ್‌ ಸ್ಟಾಕ್‌ ಕಾರ್ಪೊರೇಷನ್‌ (ಸಿಆರ್‌ಆರ್‌ಸಿ) ರೈಲನ್ನು ಸಿದ್ಧಪಡಿಸಿದ್ದು, ಡಿಸೆಂಬರ್ 15ರಂದು ಈ ರೈಲು ಭಾರತಕ್ಕೆ ರವಾನೆಯಾಗಲಿದೆ. ಮೊದಲಿಗೆ ರೈಲು ಚೆನ್ನೈ ಬಂದರನ್ನು ತಲುಪಲಿದ್ದು, ಜನವರಿ 15ರಂದು ಬೆಂಗಳೂರಿನ ಹೆಬ್ಬಗೋಡಿಗೆ ತಲುಪುವ ನಿರೀಕ್ಷೆ ಇದೆ ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Advertisements

ಮೊದಲ ರೈಲಿನ ಪರೀಕ್ಷಾ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಪರಿಣತರ ಅಗತ್ಯವಿದೆ. ಉಳಿದ ರೈಲುಗಳ ನಿರ್ವಹಣೆಗೂ ಮಾರ್ಗದರ್ಶನದ ಅಗತ್ಯವಿರುತ್ತದೆ. ಇದಕ್ಕೆ ಚೀನಾದ ತಾಂತ್ರಿಕ ಸಿಬ್ಬಂದಿ ನೆರವಾಗಲಿದ್ದಾರೆ.

ಟೆಸ್ಟಿಂಗ್, ಟೆಸ್ಟ್ ರೈಲು ಚಾಲನೆ, ಇಲ್ಲಿನ ಸಿಬ್ಬಂದಿಗೆ ತರಬೇತಿ, ಸಮಸ್ಯೆ, ಸವಾಲು ಎದುರಿಸುವ ರೀತಿ ಸೇರಿದಂತೆ ಹಲವು ವಿಚಾರಗಳ ಕುರಿತು ಚೀನಾ ಸಿಬ್ಬಂದಿ ಕೆಲಸ ಮಾಡಲಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಟಿ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಮೂಲಕ ಆರ್ ವಿ ರಸ್ತೆ-ಬೊಮ್ಮಸಂದ್ರದ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಸಂಚರಿಸಲಿದೆ. ಅಂದುಕೊಂಡಂತೆ ಆದರೆ, ಚಾಲಕ ರಹಿತ ಮೊದಲ ಮೆಟ್ರೋ ರೈಲು ಮುಂದಿನ ವಾರ ಕಾರ್ಯಾಚರಣೆ ನಡೆಸುವ ಸಾಧ್ಯತೆಗಳಿವೆ.

ಈ ಸುದ್ದಿ ಓದಿದ್ದೀರಾ? ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಕಮ್ಯುನಿಕೇಷನ್ ಬೇಸ್ಡ್ ಟ್ರೇನ್ ಕಂಟ್ರೊಲ್ ಸಿಗ್ನಲಿಂಗ್ ಸಿಸ್ಟಂ ತಂತ್ರಜ್ಞಾನವನ್ನು ಎರಡನೇ ಹಂತದ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತದೆ. ರೈಲು ಸಂಚಾರವನ್ನು ನಿಯಂತ್ರಣ ಕೊಠಡಿಯಿಂದಲೇ ನಿರ್ವಹಣೆ ಮಾಡಲಾಗುತ್ತದೆ. ಆದರೆ, ಆರಂಭದಿಂದಲೇ ಚಾಲಕ ರಹಿತ ರೈಲು ಓಡುವುದಿಲ್ಲ. ಎರಡು ವರ್ಷಗಳ ಕಾಲ ಚಾಲಕ ಸಹಿತ ರೈಲುಗಳೇ ಈ ಮಾರ್ಗದಲ್ಲಿ ಸಂಚರಿಸಲಿದ್ದು, ಸಾಕಷ್ಟು ಪೂರ್ವಾಭ್ಯಾಸದ ಬಳಿಕವಷ್ಟೇ ಇವು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X