ಚಿಕ್ಕಮಗಳೂರು | ಬಾಬಾಬುಡನ್‌ ಗಿರಿಯಲ್ಲಿ ದತ್ತ ಜಯಂತಿ; 6 ದಿನ ಪ್ರವಾಸಿಗರಿಗೆ ನಿರ್ಬಂಧ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ ಗಿರಿ ದರ್ಗಾದಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತ ಜಯಂತಿ ಆಚರಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 22 ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಬಾಬಾಬುಡನ್‌ ಗಿರಿಯಲ್ಲಿ ದತ್ತಪೀಠ ಮಾಡುತ್ತೇವೆಂದು ಹಿಂದುತ್ವ ಕೋಮುವಾದಿ ಸಂಘಟನೆಗಳು ವಿವಾದ ಸೃಷ್ಠಿಸಿವೆ. ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೀಗ, ಡಿಸೆಂಬರ್ 24, 25 ಹಾಗೂ 26 – ಮೂರು ದಿನಗಳ ಕಾಲ ದತ್ತ ಜಯಂತಿ ನಡೆಸಲು ವಿವಾದ ಸೃಷ್ಠಿಸಿರುವ ಸಂಘಟನೆಗಳು ಮುಂದಾಗಿವೆ. ಹೀಗಾಗಿ, ಇಡೀ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇಳಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಹಾಗೂ ಬಾಬಾಬುಡನ್‌ ಗಿರಿ – ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಿರ್ಬಂಧ ವಿಧಿಸಲಾಗಿರುವ ದಿನಗಳಲ್ಲಿ ವಾರಾಂತ್ಯ ಮತ್ತು ಕ್ರಿಸ್‌ಮಸ್‌ ಇದ್ದು, ಹಲವಾರು ಪ್ರವಾಸಿಗರು ಈ ತಾಣಗಳಿಗೆ ಭೇಟಿ ನೀಡುವ ಸಾಧ್ಯತೆ ಇತ್ತು. ಆದರೆ, ನಿರ್ಬಂಧದಿಂದಾಗಿ ಪ್ರವಾಸಿಗರಿಗೆ ನಿರಾಶೆಯಾಗಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X