ದಕ್ಷಿಣ ಕನ್ನಡ | ಐಟಿಡಿಪಿ ಇಲಾಖೆಯ ಧೋರಣೆ ಖಂಡಿಸಿ ಕೊರಗ ಸಮುದಾಯದ ಪ್ರತಿಭಟನೆ

Date:

Advertisements

ಆದಿವಾಸಿ ಬುಡಕಟ್ಟು ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಬೇಕಿದ್ದ ಐಟಿಡಿಪಿ ಇಲಾಖೆಯು ಜನ ವಿರೋಧಿ ಧೋರಣೆಯಿಂದ ವರ್ತಿಸುತ್ತಿದೆ ಎಂದು ಆರೋಪಿಸಿ ಆದಿವಾಸಿ ಕೊರಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಟಿಐಡಿಪಿ) ಕಚೇರಿಯ ಎದುರು ‘ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ’ ನೇತೃತ್ವದಲ್ಲಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. “ವಸತಿ ಯೋಜನೆಯ ಫಲಾನುಭವಿಗಳಿಗೆ ಕಳೆದ 8 ತಿಂಗಳಿನಿಂದ ಸಹಾಯಧನದ ಕಂತು ಬಿಡುಗಡೆ ಮಾಡಿಲ್ಲ. ಕೇಳಿದರೂ ಸತಾಯಿಸುತ್ತಿದ್ದಾರೆ” ಎಂದು ಸಿಐಟಿಯು ಮುಖಂಡ ಸುನೀಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದರ ಡಿವೈಎಫ್‌ಯ ಜಿಲ್ಲಾಧ್ಯಕ್ಷ ಜಿ.ಕೆ.ಇಮ್ತಿಯಾಜ್, “ಅತ್ಯಂತ ಶೋಷಿತ ಸಮುದಾಯವಾದ ಕೊರಗರ ಬದುಕನ್ನು ಉತ್ತಮ ಪಡಿಸಲು ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡಬೆಕು. ಆದರೆ, ಸಮುದಾಯದ ಹಕ್ಕನ್ನು ಕಸಿಕೊಳ್ಳುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಆದಿವಾಸಿ ಹಕ್ಕುಗಳ ಸಮಿತಿಯ ಯೋಗೀಶ್ ಜಪ್ಪಿನಮೊಗರು ಮಾತನಾಡಿ, “ಕೆರೆಕಾಡು ಪ್ರದೇಶದ ಕೊರಗ ಸಮುದಾಯದ ಮನೆ ನಿರ್ಮಾಣಕ್ಕೆ ಕಳೆದ 14 ತಿಂಗಳಿನಿಂದ ಹಣ ಬಿಡುಗಡೆ ಮಾಡಿಲ್ಲ. ವಿನಃಕಾರಣ ವಿಳಂಬ ಮಾಡಲಾಗುತ್ತಿದೆ. ಇದು ಆದಿವಾಸಿ ವಿರೋಧಿ ಮನೋಭಾವವನ್ನು ತಳೆದಿರುವ ಐಟಿಡಿಪಿ ಅಧಿಕಾರಿಗಳ ಧೋರಣೆಯಾಗಿದೆ” ಎಂದು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಕ್ಕುಗಳ ಸಮಿತಿಯ ಕರಿಯ ಕೆ, ಕೃಷ್ಣ ಇನ್ನ, ರಶ್ಮಿ ವಾಮಂಜೂರು, ತುಳಸಿ ಪಡುಬಿದ್ರಿ, ಕಾರ್ಮಿಕ ಮುಖಂಡ ಅಶೋಕ್ ಶ್ರೀಯಾನ್, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನಾಯಕರಾದ ಶೇಖರ್ ವಾಮಂಜೂರು, ಕೆರೆಕಾಡು ಘಟಕದ ಮುಖಂಡರಾದ ಅಭಿಜಿತ್, ಶಶಿಧರ್, ಕೇಶವ, ಮನೋಹರ್, ರಮೇಶ್ ಕೆರೆಕಾಡು ರವೀಂದ್ರ, ಕಿಶನ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮಂಗಳೂರಿನ ಉಪಾಧ್ಯಕ್ಷರಾದ ಪ್ರಶಾಂತ್ ಕಂಕನಾಡಿ,ನವೀನ್ ಕಂಕನಾಡಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮಹಿಳಾ ಮುಖಂಡರಾದ ನಿಶ್ಚಿತ, ಮಂಜುಳಾ, ಪೂರ್ಣಿಮಾ, ಶ್ವೇತ, ಸುಶೀಲ ಮುಂತಾದವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X