ಒಟಿಟಿಗೆ ಬರಲು ಸಜ್ಜಾದ ʼದಸರಾʼ

Date:

Advertisements

ತೆರೆಕಂಡ ಒಂದೇ ವಾರಕ್ಕೆ 100 ಕೋಟಿ ಕ್ಲಬ್‌ ಸೇರಿದ್ದ ʼದಸರಾʼ

ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿರುವ ಶ್ರೀಕಾಂತ್‌ ಒಡೆಲಾ

ತೆಲುಗಿನ ಸ್ಟಾರ್‌ ನಟ ನಾನಿ ಅಭಿನಯದ ʼದಸರಾʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಸ್ಟಾರ್‌ ಸಿನಿಮಾ ತೆರೆಕಂಡ ಕೆಲವೇ ದಿನಕ್ಕೆ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ.

Advertisements

ಜಗತ್ತಿನಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ಈ ಚಿತ್ರದ ಡಿಜಿಟಲ್‌ ಹಕ್ಕನ್ನು ಜನಪ್ರಿಯ ಒಟಿಟಿ ಸಂಸ್ಥೆ ʼನೆಟ್‌ಫ್ಲಿಕ್ಸ್‌ʼ ಬಹುಕೋಟಿ ಮೊತ್ತಕ್ಕೆ ಖರೀದಿ ಮಾಡಿದ್ದು, ಮೇ 12ರಂದು ಚಿತ್ರ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.

‘ದಸರಾ’ ಸಿನಿಮಾ ಈವರೆಗೆ ಗಲ್ಲಾ ಪೆಟ್ಟಿಗೆಯಲ್ಲಿ ಅಂದಾಜು 110 ಕೋಟಿ ರೂಪಾಯಿಗಳನ್ನು ಕಲೆ ಹಾಕಿದೆ. ರಾಜಮೌಳಿ, ಪ್ರಭಾಸ್‌, ಮಹೇಶ್‌ ಬಾಬು ಸೇರಿದಂತೆ ಹಲವು ತಾರೆಯರು ಚಿತ್ರವನ್ನು ನೋಡಿ, ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಚೊಚ್ಚಲ ಪ್ರಯತ್ನದಲ್ಲೇ ಸೂಪರ್‌ ಹಿಟ್‌ ಸಿನಿಮಾ ಕೊಟ್ಟ ನಿರ್ದೇಶಕ ಶ್ರೀಕಾಂತ್‌ ಒಡೆಲಾಗೆ, ನಿರ್ಮಾಪಕ ಸುಧಾಕರ್‌ ಚೆರುಕುರಿ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಿತ್ರತಂಡದ ಉಳಿದ ಕಲಾವಿದರು ಮತ್ತು ತಂತ್ರಜ್ಞರಿಗೆ ತಲಾ 10 ಗ್ರಾಂ ಚಿನ್ನದ ನಾಣ್ಯಗಳನ್ನು ನೀಡುವ ಮೂಲಕ ಯಶಸ್ಸನ್ನು ಸಂಭ್ರಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕ್ಲಾಸ್‌ ಬಂಕ್‌ ಮಾಡಿ ಸಿನಿಮಾ ನೋಡಿ ಎಂದ ತೆಲಂಗಾಣ ಶಿಕ್ಷಣ ಸಚಿವ

ಆ್ಯಕ್ಷನ್ ಪ್ಯಾಕ್‌ ಕಥಾಹಂದರವುಳ್ಳ ʼದಸರಾʼ ಚಿತ್ರದಲ್ಲಿ ನಾನಿ ಅವರಿಗೆ ಕೀರ್ತಿ ಸುರೇಶ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡಿಗ, ದಿಯಾ ಖ್ಯಾತಿಯ ನಟ ದೀಕ್ಷಿತ್‌ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಸಂತೋಷ್‌ ನಾರಾಯಣನ್ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X